ಸಿಂಧನೂರು: ನಗರದ ತಹಸಿಲ್ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಭಗವಾನ್ ಮಹಾವೀರ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು. ತಹಸೀಲ್ದಾರ್ ಅರುಣ್ ದೇಸಾಯಿ ಮಾತನಾಡಿ, ಭಗವಾನ್ ಮಹಾವೀರರು ಶಾಂತಿ ಸಂದೇಶದ ಸಂತರಾಗಿದ್ದರು. 6ನೇ ಶತಮಾನದಲ್ಲಿ 24ನೇ ಜೈನ ತೀರ್ಥಂಕರರಾಗಿದ್ದರು. ಜೈನ ಸಮುದಾಯವಷ್ಟೇ ಅಲ್ಲದೆ ಜಗತ್ತಿಗೆ ಮಾದರಿಯಾಗುವ ಸಂದೇಶಗಳನ್ನು ನೀಡಿದ್ದಾರೆ. ಅವರ ಮಾರ್ಗದಲ್ಲಿ ಎಲ್ಲರೂ ಮುನ್ನಡೆಯಬೇಕು ಎಂದರು.