ಭಗವಂತ ಶ್ರೀರಾಮನ ಫೋಟೋವಿರುವ ಪೇಪರ್ ಪ್ಲೇಟ್ಗಳಲ್ಲಿ ಗ್ರಾಹಕರಿಗೆ ಬಿರಿಯಾನಿ ಬಡಿಸುತ್ತಿರುವ ಆಘಾತಕಾರಿ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವಿಡಿಯೋ ನೋಡಿದ ನೆಟ್ಟಿಗರು ಅಂಗಡಿ ಮಾಲೀಕನ ವಿರುದ್ಧ ವ್ಯಾಪಕವಾಗಿ ಛೀಮಾರಿ ಹಾಕಿದ್ದಾರೆ. ದೆಹಲಿಯ ಜಹಾಂಗೀರ್ಪುರಿಯಲ್ಲಿರುವ ಬಿರಿಯಾನಿ ಜಾಯಿಂಟ್ನಲ್ಲಿ ಈ ಘಟನೆ ವರದಿಯಾಗಿದ್ದು, ಸದ್ಯ ಅಂಗಡಿ ಮಾಲೀಕನನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಹುಟ್ಟುಹಬ್ಬದಂದೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ತಿಂಗಳ ಬಳಿಕ ಭಯಾನಕ ಸಂಗತಿ ಬಯಲು
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಭಗವಂತ ಶ್ರೀರಾಮನ ಚಿತ್ರಗಳನ್ನು ಒಳಗೊಂಡ ಪೇಪರ್ ಪ್ಲೇಟ್ಗಳಲ್ಲಿ ಗ್ರಾಹಕರಿಗೆ ಬಿರಿಯಾನಿ ಹಾಕಿಕೊಡುತ್ತಿರುವ ದೃಶ್ಯವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದು, ಎಲ್ಲೆಡೆ ಹರಿಬಿಟ್ಟಿದ್ದಾರೆ. ಬಿರಿಯಾನಿಗಾಗಿ ಅಂಗಡಿಯ ಬಳಿ ಜನರು ಗುಂಪುಗಟ್ಟಿ ಸಾಲು ಸಾಲಾಗಿ ನಿಂತಿರುವುದು ಕಾಣಬಹುದು.
Jahangirpuri, Delhi: Biriyani was being served on paper plates with images of Lord Rama, locals and Bajrang dal object and complained to Police.
Investigation on…..https://t.co/gcojcxZYgU pic.twitter.com/HgxcgFEnke
— Megh Updates 🚨™ (@MeghUpdates) April 23, 2024
ಅಂಗಡಿ ಮಾಲೀಕನ ಈ ನಾಚಿಕೆಗೇಡಿನ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸ್ಥಳೀಯರ ಭಾರೀ ವಿರೋಧದ ಬೆನ್ನಲ್ಲೇ ಮಾಹಿತಿ ಪಡೆದ ಬಜರಂಗದಳದ ಸದಸ್ಯರು ತಕ್ಷಣವೇ ಅಂಗಡಿಯ ಮಾಲೀಕರಿಗೆ ಆ ಪ್ಲೇಟ್ಗಳಲ್ಲಿ ಬಿರಿಯಾನಿ ಮಾರಾಟ ಮಾಡದಂತೆ ಎಚ್ಚರಿಸಿ, ನಂತರದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಿದ ಪೊಲೀಸರು ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಮಾನಗೆಟ್ಟ ಕಾಂಗ್ರೆಸ್ ಜಯವೆಂದು ತಪ್ಪು ವ್ಯಾಖ್ಯಾನ: ಆರ್.ಅಶೋಕ್ ಚಾಟಿ
ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಇದರ ಹಿಂದಿದ್ದ ಕಾರಣವೇನು? ಇದು ಮಾರ್ಕೆಟಿಂಗ್ ಉದ್ದೇಶಕ್ಕಾಗಿ ಹೀಗೆ ಮಾಡಿದ್ದಾರೆಯೇ ಅಥವಾ ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶದಿಂದ ಇದನ್ನು ಮಾಡಿದ್ದಾರೆಯೇ ಎಂಬುದನ್ನು ಸದ್ಯ ಪರಿಶೀಲಿಸುತ್ತಿದ್ದಾರೆ,(ಏಜೆನ್ಸೀಸ್).
ಇನ್ನೆಷ್ಟು ಸಹಿಸಿಕೊಳ್ಳೋದು? ಮುಂದಿನ ಸೀಸನ್ಗಾದ್ರು ಈ ಬದಲಾವಣೆ ತನ್ನಿ ಸಾಕು! RCB ಫ್ಯಾನ್ಸ್ ಮನವಿ
4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು