ಮೈಸೂರು: ರಾಜ್ಯದಲ್ಲಿ ಇಂದು ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಲಾರಿಯೊಂದು ಮಗುಚಿ ಬಿದ್ದ ಪರಿಣಾಮವಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ.
ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಬೋರ್ವೆಲ್ ಲಾರಿಯೊಂದು ಹಿನಕಲ್ನಿಂದ ಬಂದು ಬೋಗಾದಿ ಕಡೆಗೆ ತೆರಳುವಾಗ ಅಪಘಾತಕ್ಕೀಡಾಗಿ ಮಗುಚಿ ಬಿದ್ದಿದೆ.
ಈ ಅಪಘಾತದಲ್ಲಿ ಲಾರಿ ಚಾಲಕ, ತಮಿಳುನಾಡು ತಿರ್ಪುರ ನಿವಾಸಿ ಷಣ್ಮುಖಂ (35) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಲಾರಿಯಲ್ಲಿದ್ದ ಸೋಮು, ಮುತ್ತುವೇಲು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆ.ಆರ್.ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರುಗಳ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು, ಮೂವರಿಗೆ ಗಾಯ, ಒಬ್ಬರ ಕಾಲು ಮುರಿತ…