More

    ಭೀಕರ ಅಪಘಾತ: ಆ್ಯಂಬುಲೆನ್ಸ್‌ನಲ್ಲಿದ್ದ ಒಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ

    ವಿಜಯಪುರ: ಲಾರಿ ಹಾಗೂ ಆ್ಯಂಬುಲೆನ್ಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆ್ಯಂಬುಲೆನ್ಸ್‌ನಲ್ಲಿದ್ದ ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಜ್ಯ ಹೆದ್ದಾರಿಯಲ್ಲಿನ ಯರಗಲ್ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಅಂತರಗಂಗಿ ಗ್ರಾಮದ ಚನ್ನು ಗಾಣಿಗೇರ (27) ಸಾವೀಡಾದ ವ್ಯಕ್ತಿ. ಆ್ಯಂಬುಲೆನ್ಸ್‌ನಲ್ಲಿದ್ದು ಗಂಭೀರವಾಗಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇದನ್ನೂ ಓದಿ: ಯಂಗ್​ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?

    ಆ್ಯಂಬುಲೆನ್ಸ್ ಸಿಂದಗಿಯಿಂದ ಹಂಚಿನಾಳ ಗ್ರಾಮಕ್ಕೆ ರೋಗಿಯನ್ನು ತರಲು ಹೋಗುತ್ತಿದ್ದಾಗ ಸಿಂದಗಿಯಿಂದ ಕಲಬುರಗಿಗೆ ಹೊರಟಿದ್ದ ಲಾರಿ ಡಿಕ್ಕಿ ಹೊಡೆದಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

    ಬೆಂಗಳೂರಿನ ಎಲ್ಲ ಆಸ್ತಿಗಳ ದಾಖಲೆ ಸಂಗ್ರಹಿಸಿ ಸ್ಕ್ಯಾನ್​ ಮಾಡಲಿದೆ ಸರ್ಕಾರ: ಉದ್ದೇಶ ಏನೆಂದು ತಿಳಿಸಿದ ಡಿಸಿಎಂ

    ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣ ಸಂಬಂಧ ಬಿ-ರಿಪೋರ್ಟ್ ಅಂಗೀಕೃತ: ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ನಿರಾಳ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts