ಆನೇಕಲ್: ಚಲಿಸುತ್ತಿದ್ದ ಕಾರಿನ ಮೇಲೆ ಜಲ್ಲಿ ತುಂಬಿದ್ದ ಲಾರಿ ಮಗುಚಿ ಬಿದ್ದಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ತಮಿಳುನಾಡಿಗೆ ಸೇರಿದ ಕಾರು ಬೆಂಗಳೂರಿನತ್ತ ತೆರಳುತ್ತಿದ್ದು. ಅತ್ತಿಬೆಲೆ-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಅತ್ತಿಬೆಲೆ ಟೋಲ್ ಬಳಿ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಏಕಾಏಕಿ ಮುಗುಚಿ ಬಿದ್ದಿದೆ. ಪರಿಣಾಮ ಕಾರು ಸಂಪೂರ್ಣ ಜಲ್ಲಿ ಕಲ್ಲಿನಿಂದ ತುಂಬಿ ಕಾರಿನಲ್ಲಿದ್ದ ಜಗದೀಶ್ ಕುಮಾರ್ ಮತ್ತು ಪವನ್ ಕುಮಾರ್ ಕಾರಿನಲ್ಲಿಯೇ ಸಿಲುಕಿ ಕೊನೆಯುಸಿರೆಳೆದಿದ್ದಾರೆ. ಮೃತರು ತಮಿಳುನಾಡು ಮೂಲದವರು, ಬೆಂಗಳೂರಿನ ನಾಗರಬಾವಿಯಲ್ಲಿ ವಾಸವಿದ್ದರು.
ರಸ್ತೆಮಧ್ಯೆ ಕಾರಿನ ಮೇಲೆ ಜಲ್ಲಿಕಲ್ಲಿನ ರಾಶಿ ಬಿದ್ದಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿತ್ತು. ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಲಾರಿ ಪಲ್ಟಿ ಹೊಡೆದ ರಭಸಕ್ಕೆ ಎರ್ಟಿಗಾ ಕಾರು ನಜ್ಜುಗುಜ್ಜಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಟ್ರಾಫಿಕ್ ಜಾಮ್ ನಿಯಂತ್ರಿಸಿದರು. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!
ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ
ಪತಿಯನ್ನ ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ! ಬೇಲ್ ಮೇಲೆ ಹೊರ ಬಂದವಳಿಂದ ಮತ್ತೊಂದು ನೀಚ ಕೃತ್ಯ