ಆನೇಕಲ್: ಇಲ್ಲಿನ ಹೊಸೂರು ರಸ್ತೆಯ ಶಿಪ್ಕಟ್ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ 10 ಮಂದಿ ಗಾಯಗೊಂಡಿದ್ದಾರೆ.
ಬಸ್ ಹೊಸೂರಿನಿಂದ ಬೆಂಗಳೂರಿಗೆ ಬರುತ್ತಿತ್ತು. ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಹೊಸೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿಪ್ಕಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.