ಹುಣಸೂರು: ಇಲ್ಲಿನ ಯಶೋಧರಪುರ ಬಳಿ 100 ಅಡಿ ಆಳದ ಹಾರಂಗಿ ನಾಲೆಗೆ ಲಾರಿಯೊಂದು ಬಿದ್ದಿದ್ದು, ಆಶ್ಚರ್ಯಕರ ರೀತಿಯಲ್ಲಿ ಚಾಲಕ ಪಾರಾಗಿದ್ದಾನೆ.
ಮಂಗಳವಾರ ಪಿರಿಯಾಪಟ್ಟಣದಲ್ಲಿ ಕಾಫಿ ಬೂಸಾ ಮೂಟೆಗಳನ್ನು ಇಳಿಸಿ ನಂತರ ಹುಣಸೂರು ಮಾರ್ಗವಾಗಿ ಕೆ.ಆರ್.ನಗರಕ್ಕೆ ಲಾರಿ ಸಾಗುತ್ತಿತ್ತು. ಯಶೋಧರಪುರ ಸಮೀಪ ಎದುರಿನಿಂದ ಬಂದ ವಾಹನದ ಬೆಳಕಿಗೆ ಲಾರಿ ಚಾಲಕ ಗಲಿಬಿಲಿಗೊಂಡಿದ್ದಾನೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಹಾರಂಗಿ ನಾಲೆ ಕಡೆ ಸಾಗಿ 100 ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ.
ಇದನ್ನೂ ಓದಿರಿ ಗ್ರಾಪಂ ಚುನಾವಣೆ ಮುಂದೂಡಿಕೆಗೆ ಕಾಂಗ್ರೆಸ್ ವಿರೋಧ.. ಹೋರಾಟದ ಎಚ್ಚರಿಕೆ ಕೊಟ್ಟ ಸಿದ್ದು!
ಕೆ.ಆರ್. ನಗರದ ನಿವಾಸಿ, ಚಾಲಕ ಮಹಮದ್ ವಾಸಿಂಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾನೆ. ಲಾರಿ ಸಂಪೂರ್ಣ ಜಖಂಗೊಂಡಿದೆ. ಈ ಲಾರಿ ಕೆ.ಆರ್. ನಗರದ ಮಹಮದ್ ಇಲ್ಯಾಸ್ ಅವರದ್ದು.
ಬುಧವಾರ ಬೆಳಗ್ಗೆ ಜೆಸಿಬಿ ಮೂಲಕ ಲಾರಿ ಮೇಲೆತ್ತುವ ಕಾರ್ಯಾಚರಣೆ ನಡೆಯಿತು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿರಿ ಸುವರ್ಣಸೌಧಕ್ಕೆ ಸರ್ಕಾರಿ ಕಚೇರಿ ಸ್ಥಳಾಂತರಿಸಲು ಸಿಎಂ ಗಡುವು