ಹೊಸಪೇಟೆ (ಬಳ್ಳಾರಿ): ಕೂಡ್ಲಿಗಿ ತಾಲೂಕಿನ ಬಣವಿಕಲ್ ಬಳಿ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಎರಡು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಲಾರಿ ಚಾಲಕ ಚಿನ್ನ(28) ಮೃತ ದುರ್ದೈವಿ. ಚಿನ್ನ ಚಾಲನೆ ಮಾಡುತ್ತಿದ್ದ ಲಾರಿಯಲ್ಲಿ ಕುಳಿತ್ತಿದ್ದ ಡೇವಿಡ್, ರಫೀಕ್ ಬಾಷ, ಪೀಟರ್, ಹೇಮಂತ್ ಕುಮಾರ್ ಎಂಬುವರು ಗಾಯಗೊಂಡಿದ್ದಾರೆ. ಎರಡೂ ಲಾರಿಗಳ ಮುಂಭಾಗ ನಜ್ಜುಗುಜ್ಜಾಗಿದ್ದು, ಲಾರಿಯ ಅವಶೇಷಗಳು ಬೆಚ್ಚಿಬೀಳಿಸುವಂತಿದೆ. ಇದನ್ನೂ ಓದಿರಿ ಪ್ಲೀಸ್ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!
ಮತ್ತೊಂದು ಲಾರಿಯ ಚಾಲಕ ಪರಮಾನಂದ ಅಜಾಗರೂಕತೆಯಿಂದ ಲಾರಿ ಡ್ರೈವ್ ಮಾಡಿಕೊಂಡು ಬಂದದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಪರಮಾನಂದ ಕೂಡ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡ್ಲಿಗಿ ತಾಲೂಕಿ ಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಯಾಣಿಕರ ಕಣ್ಣೆದುರಲ್ಲೇ ಸಾರಿಗೆ ಬಸ್ ಚಾಲಕನಿಗೆ ಚಾಕು ಚುಚ್ಚಿದ ದುಷ್ಕರ್ಮಿ! ಬೆಚ್ಚಿಬೀಳಿಸುತ್ತೆ ಈ ದೃಶ್ಯ
100 ರೂ. ಮುಖಬೆಲೆಯ ಹಳೇ ನೋಟು ಇನ್ಮುಂದೆ ಚಲಾವಣೆ ಆಗಲ್ಲ! ಸೂಚನೆ ಕೊಟ್ಟ ಆರ್ಬಿಐ
ನನ್ನನ್ನು ತಳ್ಳಿದ್ರು, ಕೂದಲು ಎಳೆದ್ರು, ಎಲ್ಲಾ ಕಡೆ ಮುಟ್ಟಲು ಬಂದ್ರು: ಶಾಸಕಿ ಸೌಮ್ಯರೆಡ್ಡಿ