ಧಾರವಾಡ: ಕಿಲ್ಲರ್ ಬೈಪಾಸ್ ಎಂದೇ ಪ್ರಸಿದ್ಧಿಯಾಗಿರುವ ಹುಬ್ಬಳ್ಳಿ-ಧಾರವಾಡ ಬೈಪಾಸ್ನ ಇಟ್ಟಿಗಟ್ಟಿ ಕ್ರಾಸ್ ಬಳಿ ಶುಕ್ರವಾರ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ದಾವಣಗೆರೆ ಮೂಲದ 12 ಮಹಿಳೆಯರು ಸೇರಿ 13 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ.
ಪ್ರತಿ ವರ್ಷ ಜನವರಿ ತಿಂಗಳಿನಲ್ಲೇ ಇಟ್ಟಿಗಟ್ಟಿ-ಯರಿಕೊಪ್ಪ ಮಧ್ಯೆ ಪದೇಪದೆ ಅಪಘಾತ ಸಂಭವಿಸುತ್ತಿದೆ. 2020ರ ಜನವರಿ 26ರಂದು ಇದೇ ರಸ್ತೆಯಲ್ಲಿ ಕುಂದಗೋಳ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಅವರ ಕಾರು ಅಪಘಾತಕ್ಕೀಡಾಗಿತ್ತು. ಈ ದುರ್ಘಟನೆಯಲ್ಲಿ ಸ್ವಾಮೀಜಿ ಸೇರಿದಂತೆ ಅವರೊಂದಿಗೆ ಪ್ರಯಾಣಿಸುತ್ತಿದ್ದವರೂ ಮೃತಪಟ್ಟಿದ್ದರು. 2011ರ ಜನವರಿ 15ರಂದೂ ಇದೇ ಜಾಗದಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಆ ವೇಳೆಯೂ 11 ಜನರ ಜೀವ ಹೋಗಿತ್ತು. ಇದನ್ನೂ ಓದಿರಿ ವರ್ಷಗಳ ನಂತರ ಒಟ್ಟಿಗೆ ಗೋವಾಕ್ಕೆ ಹೊರಟಿದ್ದ ಶಾಲಾ ಗೆಳತಿಯರ ದುರಂತ ಅಂತ್ಯ! ಮನಕಲಕುತ್ತೆ ಕೊನೇ ವಾಟ್ಸ್ಆ್ಯಪ್ ಸ್ಟೇಟಸ್
ಧಾರವಾಡ-ಹುಬ್ಬಳ್ಳಿ ಮಧ್ಯದ ಬೈಪಾಸ್ ರಸ್ತೆ ಇಕ್ಕಟ್ಟಾಗಿದ್ದು, ಈ ಭಾಗದಲ್ಲಿ ರಸ್ತೆ ಅಗಲೀಕರಣ ಆಗಿಲ್ಲ. ಹುಬ್ಬಳ್ಳಿಯ ಗಬ್ಬೂರ ಬೈಪಾಸ್ನಿಂದ ಧಾರವಾಡದ ನರೇಂದ್ರ ವರೆಗೆ ಸಿಂಗಲ್ ಲೇನ್ ಇದೆ. ಪರಿಣಾಮ ಈ ಸ್ಥಳ ಅಪಘಾತ ವಲಯವಾಗಿ ಮಾರ್ಪಟ್ಟಿದೆ. ರಸ್ತೆ ಅಗಲೀಕರಣಕ್ಕಾಗಿ ಹಲವರು ಹೋರಾಟ ಮಾಡಿದ್ದರೂ ಪ್ರಯೋಜನವಾಗಿಲ್ಲ.
ಇಟ್ಟಿಗಟ್ಟಿ ಕ್ರಾಸ್ನಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಗದೀಶ ಶೆಟ್ಟರ್, ಹು-ಧಾ ಮಧ್ಯೆ 6 ಲೇನ್ ರಸ್ತೆ ಆಗಬೇಕು. ಈ ಸಂಬಂಧ ಈಗಾಗಲೇ ಡಿಪಿಆರ್ ರೆಡಿ ಆಗ್ತಿದೆ. ಹಾಲಿ ರಸ್ತೆ ಅಶೋಕ್ ಖೇಣಿ ಒಡೆತನದ ನೈಸ್ ಸಂಸ್ಥೆ ಒಡೆತನದಲ್ಲಿದೆ. ಅವರನ್ನ ಭೇಟಿಯಾಗಿ ರಸ್ತೆ ವಿಸ್ತರಣೆ ಬಗ್ಗೆ ಮಾತನಾಡಿದ್ದೇವೆ. 2024ರ ವರೆಗೆ ನೀವೆ ಟೋಲ್ ಕಲೆಕ್ಟ್ ಮಾಡಿಕೊಳ್ಳಿ, ಆದ್ರೆ ರಸ್ತೆ ವಿಸ್ತರಣೆಗೆ ಅವಕಾಶ ಕೊಡಿ ಅಂತ ವಿನಂತಿಸಿದ್ದೇವೆ. ಇದಕ್ಕೆ ಅವರೂ ಸಮ್ಮತಿಸಿದ್ದಾರೆ. ಈ ಬಗ್ಗೆ ಒಪ್ಪಿಗೆ ಪತ್ರ ಕೊಟ್ಟಿದ್ದಾರೆ. ನಿತಿನ್ ಗಡ್ಕರಿ ಅವರಿಗೂ ಹೇಳಿದ್ದೇನೆ ಎಂದರು. 6 ಲೇನ್ ರಸ್ತೆ ಆಗೋದ್ರಿಂದ ರಸ್ತೆ ಅಪಘಾತ ತಡೆಯಬಹುದು ಎಂದರು.
ಧಾರವಾಡದಲ್ಲಿ ಭೀಕರ ಅಪಘಾತಕ್ಕೆ 13 ಜನ ಬಲಿ! ಆ ಕ್ಷಣ ಕುರಿತು ಗಾಯಾಳು ಬಿಚ್ಚಿಟ್ಟ ಎಕ್ಸ್ಕ್ಲೂಸಿವ್ ಮಾಹಿತಿ ಇಲ್ಲಿದೆ
ತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ