ಬೆಳಗಾವಿ: ಕೆಲವೇ ದಿನಗಳ ಅಂತರದಲ್ಲಿ ಸಂಭವಿಸಿದ್ದ ಎರಡು ಭಯಂಕರ ಸ್ಫೋಟದ ದುರಂತಗಳ ಬೆನ್ನಿಗೇ ಪೊಲೀಸರು ಭಾರಿ ಪ್ರಮಾಣದ ಸ್ಫೋಟಕ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆ ಮೂಲಕ ಸಂಭಾವ್ಯ ಸ್ಫೋಟ ಪ್ರಕರಣವೊಂದನ್ನು ಪೊಲೀಸರು ತಪ್ಪಿಸಿದಂತಾಗಿದೆ ಎಂದರೂ ಅತಿಶಯೋಕ್ತಿಯೇನಲ್ಲ.
ತಿಂಗಳ ಹಿಂದೆ ಶಿವಮೊಗ್ಗದಲ್ಲಿ ಭಾರಿ ಸ್ಫೋಟ ಸಂಭವಿಸಿ ಆರು ಮಂದಿ ಸಾವಿಗೀಡಾಗಿದ್ದರು. ಅದಾದ ಕೆಲವೇ ದಿನಗಳಲ್ಲಿ ಚಿಕ್ಕಬಳ್ಳಾಪುರದಲ್ಲೂ ಸ್ಫೋಟಕ ಸಾಮಗ್ರಿಗಳು ಸಿಡಿದು ಭಾರಿ ಸಾವು-ನೋವು ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ರಾಜ್ಯಾದ್ಯಂತ ಸ್ಫೋಟಕ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದು, ಇದೀಗ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ತೋಟದಲ್ಲಿ ಸಂಗ್ರಹಿಸಿದ್ದ ಸ್ಪೋಟಕ ಹಾಗೂ ಭಾರಿ ಪ್ರಮಾಣದ ಜಿಲೆಟಿನ್ ವಶಪಡಿಸಿಕೊಂಡಿದ್ದಾರೆ.
ಸರ್ಕಾರದಿಂದ ಯಾವುದೇ ಪರವಾನಗಿ ಪಡೆಯದೆ ಶಿವರಾಮ್ ಲೋಕಂಡೆ ಎಂಬುವವರ ಜಮೀನಿನಲ್ಲಿ ಈ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿತ್ತು. ಪ್ರಕರಣ ಸಂಬಂಧ ಶಿವರಾಮ ಲೋಕಂಡೆ, ಈರಯ್ಯ ಹಿರೇಮಠ, ಬಾಳೇಶ ಅನಂತಪೂರ, ವಿಜಯ ಜಾಧವ್ ಎಂಬವರನ್ನು ಬಂಧಿಸಿರುವ ಪೊಲೀಸರು, ಎರಡು ಟ್ರಾಕ್ಟರ್ ಹಾಗೂ ಒಂದು ಜೆಸಿಬಿಯನ್ನೂ ವಶಕ್ಕೆ ಪಡೆದಿದ್ದಾರೆ. ಜಿಲೆಟಿನ್ ತುಂಬಿದ ಮೂರು ರಟ್ಟಿನ ಬಾಕ್ಸ್, ಜಿಲೆಟಿನ್ ಸ್ಫೋಟಿಸುವ ಪದಾರ್ಥಗಳನ್ನು ವಶಕ್ಕೆ ಪಡೆದ ಪೊಲೀಸರು, ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್ಬುಕ್ ಪೇಜ್ ಲೈಕ್ ಮಾಡಿ
ಬಿಗ್ಬಾಸ್ ಮನೆಯಲ್ಲಿ ಚಾಮಯ್ಯ ಮೇಷ್ಟ್ರ ಮಗ ಪಾಠ ಮಾಡ್ತಾರಾ? ಆಟ ಆಡ್ತಾರಾ?