ತಾವರೆಕೆರೆ ದ್ರೌಪದಮ್ಮ ಹೂವಿನ ಕರಗ ಸಂಪನ್ನ

blank

ನಂದಗುಡಿ: ಹೊಸಕೋಟೆ ತಾಲೂಕಿನ ತಾವರೆಕೆರೆಯಲ್ಲಿ ಶ್ರೀ ದ್ರೌಪದಮ್ಮ ದೇವಿ 74ನೇ ಹೂವಿನ ಕರಗ ಮಹೋತ್ಸವ ಅದ್ದೂರಿಯಾಗಿ ನೆರವೇರಿತು. ಏ.21 ರಿಂದ 26ರವರೆಗೆ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ದೇವಾಲಯದಿಂದ ಕರಗ ಹೊರಟಿತು. ಗೋವಿಂದ ಗೋವಿಂದ ಎಂಬ ನಾಮ ಜಪದೊಂದಿಗೆ ಕರಗ ಹೊರ ಬರುತ್ತಿದ್ದಂತೆ ಭಕ್ತರ ಘೋಷಣೆ ಮೊಳಗಿತು.

blank

ನಂತರ ದೇವಾಲಯದ ಮುಂಭಾಗದ ವಿಶಾಲ ಬಯಲಿನಲ್ಲಿ ಒಂದು ಗಂಟೆಗೂ ಹೆಚ್ಚಿನ ಕಾಲ ಆಕರ್ಷಕ ಕರಗದ ನೃತ್ಯ ಪ್ರದರ್ಶನ ನಡೆಯಿತು.
ಕರಗವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಕರಗಕ್ಕೆ ತಮಟೆ ಮತ್ತಿತರ ವಾದ್ಯಗಳು ಸಾಥ್​ ನೀಡಿದವು. ನಂತರ ಪ್ರತಿ ಮನೆಯಲ್ಲೂ ಕರಗಕ್ಕೆ ಮಡಿಲು ತುಂಬಿ ದೇವಿಯನ್ನು ಬರಮಾಡಿಕೊಂಡು ಕರಗದತ್ತ ಮಲ್ಲಿಗೆಯ ಮಳೆಸುರಿಸಲಾಯಿತು.

ಗ್ರಾಮದಲ್ಲಿ 22ಕ್ಕೂ ಹೆಚ್ಚು ಪಲ್ಲಕ್ಕಿ ಉತ್ಸವಗಳು, ವಾದ್ಯಗೋಷ್ಠಿ ಸಹ ನಡೆದವು. ನಂತರ ಕರಗವು ಮರಳಿ ದೇವಾಲಯ ಸೇರಿತು. 2ನೇ ಬಾರಿಗೆ ಕರಗವನ್ನು ಹೊತ್ತ ಟಿ.ಎಂ.ಲಕ್ಷಿ$್ಮ ನಾರಾಯಣ ಯಶಸ್ವಿಗೊಳಿಸಿ ಜನರ ಮನ್ನಣೆಗೆ ಪಾತ್ರರಾದರು. ಶಾಸಕ ಶರತ್​ ಬಚ್ಚೇಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ವಿ.ರಾಜಶೇಖರಗೌಡ, ಉದ್ಯಮಿ ಬಿ.ವಿ.ಬೈರೇಗೌಡ, ಬಿಎಂಆರ್​ಡಿಎ ನಿರ್ದೇಶಕ ಡಾ.ಎಚ್​.ಎಂ.
ಸುಬ್ಬರಾಜು ಇದ್ದರು.

Share This Article

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…

ಬೇಸಿಗೆಯಲ್ಲಿ ಪಿತ್ತಕೋಶ ಸಮಸ್ಯೆ ಹೆಚ್ಚಳ

| ಪಂಕಜ ಕೆ.ಎಂ., ಬೆಂಗಳೂರು ಬಿಸಿಲ ಝುಳ ಹೆಚ್ಚಾಗಿದ್ದರೂ ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವ ಜನರು…