ಬೆಂಗಳೂರು: ರಾಜ್ಯದ ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳ ಹೆಚ್ಚು ಶಬ್ಧದಿಂದ ಜನರಿಗೆ ತೊಂದರೆ ಉಂಟಾಗಿದ್ದರೆ, ಪರಿಶೀಲಿಸಿ ನಿಮಾನುಸಾರು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಪೊಲೀಸ್ ಇಲಾಖೆ ಸೂಚಿಸಿದೆ.
ರಾಜ್ಯಾದ್ಯಂತ ಮಸೀದಿಗಳಲ್ಲಿ ಅನಧಿಕೃತವಾಗಿ ಧ್ವನಿವರ್ಧಕ ಅಳವಡಿಸಿದ್ದಾರೆ. ಇದರಿಂದ ಜನರಿಗೆ ತೊಂದರೆಯಾಗಿದ್ದು, ಕೂಡಲೇ ತೆರವುಗೊಳಿಸುವಂತೆ ಒತ್ತಾಯಿಸಿ ಡಿಜಿಪಿಗೆ ಬೆಂಗಳೂರಿನ ವಕೀಲ ಹರ್ಷ ಮುತಾಲಿಕ್ ಮನವಿ ಸಲ್ಲಿಸಿದ್ದರು. ಇದಕ್ಕೆ ಡಿಜಿಪಿ ಕಚೇರಿ ಪ್ರತಿಕ್ರಿಯಿಸಿದ್ದು, ಮಸೀದಿಗಳಲ್ಲಿ ಮುಸ್ಲಿಮರು ಸಲ್ಲಿಸುವ ಪ್ರಾರ್ಥನೆಯಲ್ಲಿ ಹೆಚ್ಚು ಧ್ವನಿ ಮಾಡುತ್ತಿರುವ ಧ್ವನಿವರ್ಧಕಗಳ ಮೇಲೆ ನಿರ್ಬಂಧ ಹೇರುವಂತೆ ಒತ್ತಾಯಿಸಿದ್ದಾರೆ.
ಈ ಮಾಹಿತಿ ಪಡೆದು ನಿಯಮಾನುಸಾರ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಜಿಪಿ ಪರವಾಗಿ ಎಐಜಿಪಿ ಸುತ್ತೋಲೆ ಹೊರಡಿಸಿದ್ದಾರೆ.