ವಾರಂಗಲ್: ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಸಬ್ ಇನ್ಸ್ಪೆಕ್ಟರ್ ನಡುವಿನ ಲವ್ವಿಡವ್ವಿ ಪ್ರಕರಣ ತೆಲಂಗಾಣದ ವಾರಂಗಲ್ನಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದ್ದು, ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಇಬ್ಬರನ್ನೂ ವಾರಂಗಲ್ ಪೊಲೀಸ್ ಕಮಿಷನರ್ ರಂಗನಾಥ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಗೆಸಿಗೊಂಡ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರಾಯಲ ವೆಂಕಟೇಶ್ವರಲು ಮತ್ತು ದಮೇರಾ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಹರಿಪ್ರಿಯಾ ಅಮಾನತಾದ ಅಧಿಕಾರಿಗಳು. ಇಬ್ಬರ ಮಿತಿ ಮೀರಿದ ವರ್ತನೆಯಿಂದಾಗಿ ಅಮಾನತು ಶಿಕ್ಷೆಗೆ ಗುರಿಯಾಗಿದ್ದಾರೆ.
ಎಸ್ಐ ಹರಿಪ್ರಿಯಾ ಇತ್ತೀಚೆಗಷ್ಟೇ ಮದುವೆಯಾಗಿದ್ದಾರೆ. ಆದರೂ ಮೊದಲಿನಿಂದಲೂ ಪರಿಚಯವಿದ್ದ ಸಿಐ ವೆಂಕಟೇಶ್ವರಲು ಜೊತೆ ತಮ್ಮ ರೊಮ್ಯಾನ್ಸ್ ಮುಂದುವರಿಸಿದ್ದರು. ಪತ್ನಿ ಹರಿಪ್ರಿಯಾ ವರ್ತನೆಯ ಬಗ್ಗೆ ಗಂಡನಿಗೆ ಅನುಮಾನವಿತ್ತು. ಅಲ್ಲದೆ, ಪತ್ನಿಯ ವಾಟ್ಸ್ಆ್ಯಪ್ ಚಾಟ್ ಅನ್ನು ಗಂಡ ಗಮನಿಸಿದ್ದ. ಸಿಐ ಮತ್ತು ಎಸ್ಐ ನಡುವೆ ತುಂಬಾ ಸಲುಗೆಯ ಚಾಟಿಂಗ್ ನಡೆಯುತ್ತಿತ್ತು. ಬಳಿಕ ವಾರಂಗಲ್ ಕಮಿಷನರ್ಗೆ ಹರಿಪ್ರಿಯಾ ಗಂಡ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸ್ ಕಮಿಷನರ್ಗೆ ಸಿಐ ಮತ್ತು ಎಸ್ಐ ನಡುವೆ ಲವ್ವಿಡವ್ವಿ ಇರುವುದು ತಿಳಿದಿದೆ. ತಕ್ಷಣವೇ ಇಬ್ಬರನ್ನು ಅಮಾನತು ಮಾಡುವ ಮೂಲಕ ಕ್ರಮ ಜರುಗಿಸಿದ್ದಾರೆ. (ಏಜೆನ್ಸೀಸ್)
ಎಲ್ಲ ವಿಡಿಯೋ, ಆಡಿಯೋಗಳನ್ನು ಕೊಡಲು ಸಿದ್ಧ! ಅಣ್ಣಾಮಲೈ ವಿರುದ್ಧ ನಟಿ ಗಾಯತ್ರಿ ಗಂಭೀರ ಆರೋಪ
ವಿವಾಹೇತರ ಸಂಬಂಧ ಹೊಂದಿದ್ದ ಉಪನ್ಯಾಸಕ ಹೆಂಡತಿ ಮಕ್ಕಳಿಗೆ ವಿಷ ಉಣಿಸಿ ತಾನೂ ಪ್ರಾಣ ಬಿಟ್ಟ…