ಬೆಂಗಳೂರು: ಪ್ರೀತಿಸಿದ ಯುವತಿಯನ್ನು ಪ್ರಿಯಕರ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಾಲಿನಿ ಮೃತಪಟ್ಟ ಯುವತಿ. ಇದೀಗ ಆರೋಪಿ ಮನೋಜ್ ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ.
ಮನೋಜ್ ಮತ್ತು ಶಾಲಿನಿ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಶಾಲಿನಿಗೆ ಬೇರೊಬ್ಬನೊಂದಿಗೆ ಮದುವೆ ನಿಶ್ಚಯವಾಗಿತ್ತು. ಈ ವಿಆಚರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಯಾರೂ ಇಲ್ಲದೆ ವೇಳೆ ನಿನ್ನೆ ಸಂಜೆ ಶಾಲಿನಿ ನಿವಾಸಕ್ಕೆ ಮನೋಜ್ ಬಂದಿದ್ದಾನೆ. ಈ ವೇಳೆ ಇಬ್ಬರ ನಡುವೆ ಮತ್ತೆ ಗಲಾಟೆ ನಡೆದಿದ್ದು, ಮನೆಯವರು ತೋರಿಸಿದ ಹುಡುಗನನ್ನು ನೀನು ಒಪ್ಪಿದ್ದೀಯಾ ಎಂದು ಮನೋಜ್ ಪ್ರಶ್ನಿಸಿದ್ದಾನೆ.
ಇದನ್ನೂ ಓದಿ: ರ್ಯಾಶ್ ಡ್ರೈವಿಂಗ್ ಪ್ರಶ್ನಿಸಿದ್ದೇ ತಪ್ಪಾಯ್ತು! ಸಿಟ್ಟಿನಲ್ಲಿ ಚಾಕುವಿನಿಂದ ಕುತ್ತಿಗೆಗೆ ಹಲ್ಲೆ
ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಗಲಾಟೆ ಬಳಿಕ ಮನೋಜ್ ದಿಂಬಿನಿಂದ ಉಸಿರುಗಟ್ಟಿಸಿ ಶಾಲಿನಿಯನ್ನು ಕೊಲೆ ಮಾಡಿದ್ದಾನೆ. ನಂತರ ಅಲ್ಲಿಂದ ಕೆ.ಪಿ.ಅಗ್ರಹಾರದಲ್ಲಿರುವ ತನ್ನ ಮನೆಗೆ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಮನೋಜ್ನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.
ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡ ವಿಲ್ಸನ್ ಗಾರ್ಡನ್ ಠಾಣೆಯ ಪೊಲೀಸರು, ವಿಚಾರಣೆ ನಡೆಸಿದ್ದಾರೆ. ಆರೋಪಿ ಮನೋಜ್ ಅತ್ಯಾಚಾರ ಎಸಗಿ ಶಾಲಿನಿಯನ್ನು ಕೊಲೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯ ವೇಳೆ ಪತ್ತೆಯಾಗಿದೆ.
ಇದನ್ನೂ ಓದಿ: ತುಮಕೂರು | 500 ರೂ. ವಿಚಾರಕ್ಕೆ ಗಲಾಟೆ; ಸಿಟ್ಟಿನಲ್ಲಿ ಹೆಂಡತಿ, ಮಕ್ಕಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದವನ ಬಂಧನ!