More

    ಲವರ್​ ಜತೆ ಲಾಡ್ಜ್​ಗೆ ತೆರಳಿದ ಮೇಕಪ್​ ಆರ್ಟಿಸ್ಟ್​ಗೆ ಕಾದಿತ್ತು ಶಾಕ್: ಸಮಾವೇಶಕ್ಕೆ ಬಂದು ಶವವಾದಳು

    ಕೊಚ್ಚಿ: ಮೇಕಪ್​ ಆರ್ಟಿಸ್ಟ್​ ಒಬ್ಬಳು ಪ್ರಿಯಕರನಿಂದಲೇ ಬರ್ಬರ ಹತ್ಯೆಯಾಗಿರುವ ಘಟನೆ ಕೇರಳದ ಕಾಸರಗೋಡಿನ ಕನ್ಹಂಗಾಡ್​ನಲ್ಲಿರುವ ಲಾಡ್ಜ್​ ಒಂದರಲ್ಲಿ ಮಂಗಳವಾರ ನಡೆದಿದೆ.

    ಠಾಣೆಗೆ ತೆರಳಿ ಶರಣು

    ಕೊಲೆಯಾದ ಮಹಿಳೆಯನ್ನು ಪಿ.ಬಿ. ದೇವಿಕಾ (34) ಎಂದು ಗುರುತಿಸಲಾಗಿದೆ. ಈಕೆ ಉದ್ಮಾ ಪಂಚಾಯಿತಿಯ ಮುಕ್ಕುನೋಥ್​ ನಿವಾಸಿ. ಆಕೆಯ ಮಂಗಳವಾರ ಮಧ್ಯಾಹ್ನ 1.30ಕ್ಕೆ ಹತ್ಯೆ ಮಾಡಿದ ಬಳಿಕ ಪ್ರಿಯಕರ ಸತೀಶ್​ (36) ಲಾಡ್ಜ್​ ರೂಮ್​ ಅನ್ನು ಲಾಕ್​ ಮಾಡಿ ಸುಮಾರು 500 ಮೀಟರ್​ ದೂರದಲ್ಲಿರುವ ಪೊಲೀಸ್​ ಠಾಣೆಗೆ ಕಾಲ್ನಡಿಗೆಯಲ್ಲಿ ತೆರಳಿ ಪೊಲೀಸರ ಮುಂದೆ ಶರಣಾದನು ಎಂದು ಕನ್ಹಂಗಾಡ್​ ಡಿವೈಎಸ್​ಪಿ ಬಾಲಕೃಷ್ಣನ್​ ನಾಯರ್​ ತಿಳಿಸಿದ್ದಾರೆ.

    ಇದನ್ನೂ ಓದಿ: ಕರೊನಾ ಲಾಕ್‌ಡೌನ್‌ನಲ್ಲಿ ಮಗಳ ಸಮಾನ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

    makeup artist Devika 1

    ಸಂಜೆ 5 ಗಂಟೆ ಸುಮಾರಿಗೆ ಸತೀಶ್​ ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ. ಬಳಿಕ ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಲಾಡ್ಜ್​ ರೂಮ್​ ಅನ್ನು ತೆರೆದಾಗ ದೇವಿಕಾ ಕತ್ತು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದಳು ಎಂದು ಬಾಲಕೃಷ್ಣನ್​ ನಾಯರ್​ ಮಾಹಿತಿ ನೀಡಿದರು.

    ಇಬ್ಬರಿಗೂ ಈಗಾಗಲೇ ಮದುವೆ

    ಆರೋಪಿ ಸತೀಶ್ ಮುಲ್ಲಿಯಾರ್​ ಗ್ರಾಮ ಪಂಚಾಯಿತಿಯ​ ಬೊವಿಕನಮ್​ ಮೂಲದ ನಿವಾಸಿ. ಈತ ಕನ್ಹಂಗಾಡ್​ ಪಟ್ಟಣದಲ್ಲಿ ಖಾಸಗಿ ಸೆಕ್ಯುರಿಟಿ ಏಜೆನ್ಸಿಯನ್ನು ನಡೆಸುತ್ತಿದ್ದಾರೆ. ಈಗಾಗಲೇ ಈತನಿಗೆ ಮದುವೆಯಾಗಿದ್ದು, ಒಂದು ಮಗು ಕೂಡ ಇದೆ. ದೇವಿಕಾಗೂ ಮದುವೆ ಆಗಿತ್ತು. ಆಕೆಗೆ ಇಬ್ಬರು ಮಕ್ಕಳಿದ್ದಾರೆ.

    ಡಿವೋರ್ಸ್​ ನೀಡುವಂತೆ ಒತ್ತಾಯ

    ಪತ್ನಿಗೆ ಡಿವೋರ್ಸ್​ ನೀಡಿ ತನ್ನೊಂದಿಗೆ ಇರುವಂತೆ ದೇವಿಕಾ ಒತ್ತಾಯ ಮಾಡುತ್ತಿದ್ದಳು. ಹೀಗಾಗಿ ಆಕೆಯನ್ನು ಕೊಲೆ ಮಾಡಿದೆ ಎಂದು ಸತೀಶ್​ ಪೊಲೀಸರ ಮುಂದೆ ಹೇಳಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸದ್ಯ ತನಿಖೆ ಆರಂಭಿಸಿದ್ದಾರೆ.

    ಇದನ್ನೂ ಓದಿ: ಮತ್ತೆ ಮದುವೆಯಲ್ಲ ಲಿವಿಂಗ್ ಟುಗೆದರ್: ಕೊನೆಗೂ ಮೌನ ಮುರಿದ ನರೇಶ್-ಪವಿತ್ರಾ ಲೋಕೇಶ್

    makeup artist Devika 2

    ಸಮಾವೇಶಕ್ಕೆ ಬಂದವಳ ದುರಂತ ಅಂತ್ಯ

    ಕಳೆದ ಎರಡು ತಿಂಗಳಿನಿಂದ ಸತೀಶ್​ ಲಾಡ್ಜ್​ನಲ್ಲಿ ವಾಸವಿದ್ದನು. ಕನ್ಹಂಗಾಡ್​ನಿಂದ 20 ಕಿಮೀ ದೂರದಲ್ಲಿರುವ ತನ್ನ ಊರಿನಿಂದ ದೇವಿಕಾ ಲಾಡ್ಜ್​ಗೆ ಬಂದಿದ್ದಳು. CITU ಗೆ ಸಂಯೋಜಿತವಾಗಿರುವ ಕೇರಳ ಸ್ಟೇಟ್ ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಾವೇಶದಲ್ಲಿ ಭಾಗವಹಿಸಲು ಕನ್ಹಂಗಾಡ್​ಗೆ ಬಂದಿದ್ದಳು. ಸಮಾವೇಶ ಬಳಿಕ ಸತೀಶ್​ನನ್ನು ಭೇಟಿ ಮಾಡಿ, ಆತನೊಂದಿಗೆ ಲಾಡ್ಜ್​ಗೆ ತೆರಳಿದ್ದಳು. ಈ ವೇಳೆ ಆಕೆಯನ್ನು ಕೊಂದಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ. (ಏಜೆನ್ಸೀಸ್​)

    ಬಸ್ಸಿನಲ್ಲಿ ಮಹಿಳೆಯರಿಬ್ಬರ ಮಧ್ಯೆ ಕುಳಿತು ಕಾಮಚೇಷ್ಟೆ: ವಿಡಿಯೋ ಹರಿಬಿಟ್ಟು ಘಟನೆ ವಿವರಿಸಿದ ನಟಿ

    ಸಿದ್ದರಾಮಯ್ಯ ಪ್ರಮಾಣ ವಚನ ಸಮಾರಂಭದಂದು ಸಿಇಟಿ ವಿದ್ಯಾರ್ಥಿಗಳಿಗೆ ಟ್ರಾಫಿಕ್ ಕಿರಿಕಿರಿ!

    ಪುತ್ತೂರಿನಲ್ಲಿ ಪೊಲೀಸ್​​ ದೌರ್ಜನ್ಯ ಪ್ರಕರಣ | ಇದು ನೂರಕ್ಕೆ ನೂರು ಕಾಂಗ್ರೆಸ್​ನ ಕಿತಾಪತಿ; ಕಲ್ಲಡ್ಕ ಪ್ರಭಾಕರ ಭಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts