More

    ಪ್ರೇಯಸಿಗೆ ಚೂರಿಯಿಂದ ಇರಿದು ತಾನೂ ಕುತ್ತಿಗೆ ಕೊಯ್ದುಕೊಂಡ ಪ್ರಿಯಕರ

    ಉಡುಪಿ: ಯುವತಿಗೆ ಚೂರಿಯಿಂದ ಇರಿದು, ಬಳಿಕ ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉಡುಪಿ ಜಿಲ್ಲೆಯ ಸಂತೆಕಟ್ಟೆ ಸಮೀಪದ ರೋಬೊಸಾಫ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಇಬ್ಬರೂ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಉಡುಪಿಯ ಸಂತೆಕಟ್ಟೆ ಸಮೀಪ ಬ್ಯಾಂಕ್​​ನಲ್ಲಿ ಉದ್ಯೋಗಿಯಾಗಿರುವ ಯುವತಿ ಮತ್ತು ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಯುವತಿಗೆ ವಾರದ ಹಿಂದೆ ನಿಶ್ಚಿತಾರ್ಥ ಕೂಡ ಆಗಿತ್ತು. ಇದರಿಂದ ಯುವಕ ಸಂದೇಶ ಕುಲಾಲ್ ಕುಪಿತಗೊಂಡಿದ್ದನು ಎನ್ನಲಾಗಿದೆ. ಈ ವಿಚಾರವಾಗಿ ಇಬ್ಬರಿಗೂ ಜಗಳ ಆಗಿದೆ. ಬ್ಯಾಂಕಿನಿಂದ ಯುವತಿ ಮನೆಗೆ ವಾಪಸ್ ಆಗುತ್ತಿದ್ದ ಸಂದರ್ಭ ಯುವಕ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಬಳಿ ಅಡ್ಡಗಟ್ಟಿ, ಯುವತಿಯ ಜೊತೆ ವಾಗ್ವಾದ ನಡೆಸಿದ್ದಾನೆ.

    ಜಗಳ ಮುಂದುವರೆದು ಯುವಕ ಯುವತಿಗೆ ಚಾಕುವಿನಿಂದ ಇರಿದಿದ್ದಾನೆ. ನಂತರ ದ್ವಿಚಕ್ರ ವಾಹನದಿಂದ ಯುವತಿ ಕೆಳಗೆ ಬಿದ್ದಿದ್ದಾಳೆ. ಪಾಗಲ್ ಪ್ರೇಮಿಯೂ ನಂತರ ಅದೇ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡಿದ್ದಾನೆ. ಸ್ಥಳೀಯರು ಘಟನೆಯನ್ನು ತಪ್ಪಿಸಲು ಯತ್ನಿಸಿದ್ದು, ಅಷ್ಟರಲ್ಲೇ ಇಬ್ಬರೂ ಕುಸಿದು ಬಿದ್ದಿದ್ದಾರೆ. ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆಂದು ತಿಳಿದು ಬಂದಿದೆ. ಉಡುಪಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಎಸ್ಪಿ ಕುಮಾರ್ ಚಂದ್ರ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿಯನ್ನು ಕಲೆಹಾಕಿದ್ದಾರೆ. 

    ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ; ಹೆಂಡ್ತಿಯನ್ನು ಉಸಿರುಗಟ್ಟಿಸಿ ಕೊಂದ ಗಂಡ ತಾನು ನೇಣು ಬಿಗಿದುಕೊಂಡ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts