ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ: ಇನ್ಮುಂದೆ ನಾನು ನಿದ್ದೆ ಮಾಡಲ್ಲ ಎಂದ ರೇಣುಕಾಚಾರ್ಯ

ದಾವಣಗೆರೆ: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರದ ಶಾಸಕ ಬಿ.ವೈ. ವಿಜಯೇಂದ್ರ ನೇಮಕವಾದ ಬೆನ್ನಲ್ಲೇ ಹೊನ್ನಾಳಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು​ ರಾಜಕೀಯದಲ್ಲಿ ಮತ್ತೆ ಫುಲ್ ಆ್ಯಕ್ಟೀವ್ ಆಗಿದ್ದಾರೆ. ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಇನ್ಮುಂದೆ ನಾನು ನಿದ್ದೆ ಮಾಡುವುದಿಲ್ಲ! ವಿಜಯೇಂದ್ರ ಜೊತೆ ಸೇರಿ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತೇನೆ. 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಸಂಘಟನೆ ಮಾಡುತ್ತೇನೆ ಎಂದರು. ವಿಧಾನಸಭಾ ಚುನಾವಣೆ ಸೋಲಿನ … Continue reading ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕ: ಇನ್ಮುಂದೆ ನಾನು ನಿದ್ದೆ ಮಾಡಲ್ಲ ಎಂದ ರೇಣುಕಾಚಾರ್ಯ