ಶಿಕ್ಷಕರ ಬಡ್ತಿ ಅನ್ಯಾಯ ಸರಿಪಡಿಸಲು ಸಮಿತಿ ರಚನೆ:ವಿಧಾನಪರಿಷತ್ತಿಗೆ ಮಧು ಬಂಗಾರಪ್ಪ ಭರವಸೆ

minister Madhu Bangarappa

ಬೆಂಗಳೂರು: ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಹಾಗೂ ಪ್ರೌಢ ಶಾಲೆಯಿಂದ ಪದವಿ ಪೂರ್ವ ಕಾಲೇಜುಗಳಿಗೆ ಶಿಕ್ಷಕರ ಪದೋನ್ನತಿ ವಿಚಾರದಲ್ಲಿ ಅನ್ಯಾಯ ಸರಿಪಡಿಸಲು ಶಾಸಕರು ಸೇರಿ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.

ಬಿಜೆಪಿಯ ಸಂಕನೂರ,ಜೆಡಿಎಸ್​ನ ಭೋಜೆಗೌಡ ಮತ್ತು ಕಾಂಗ್ರೆಸ್​ನ ಪುಟ್ಟಣ್ಣ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದ್ಯದಲ್ಲೇ ಸಮಿತಿ ರಚಿಸಿ ಕಾಲ ಮಿತಿಯೊಳಗೆ ತೀರ್ಮಾನ ಕೈಗೊಳ್ಳಲಾಗುವುದು.

ಬಹಳ ವರ್ಷದಿಂದ ಈ ಸಮಸ್ಯೆ ಇದೆ. 6ನೇ ವೇತನ ಆಯೋಗ ಬಳಿಕ ಬಡ್ತಿ ನೀಡುವುದನ್ನು ಸರ್ಕಾರ ಒಪ್ಪಿಲ್ಲ.ಶಿಕ್ಷಕರಿಗೆ ನ್ಯಾಯ ಕೊಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ. ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಅಲ್ಲಿನ ಶಿಕ್ಷಕರಿಗೆ ಯಾವ ರೀತಿ ಬಡ್ತಿ ನೀಡಲಾಗಿದೆ ಎಂಬ ವರದಿಯನ್ನು ತರಿಸಿಕೊಂಡು ಅಧ್ಯಯನ ನಡೆಸುತ್ತೇನೆ.ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದು ಮುಂದುವರಿಯುತ್ತೇನೆ ಎಂದರು.
ಬಡ್ತಿ ನೀಡುವ ವಿಚಾರದಲ್ಲಿ ಅಧಿಕಾರಿಗಳನ್ನ ಒಳಗೊಂಡ ಸಮಿತಿ ರಚಿಸಬೇಡಿ. ಅವರು ದಾರಿ ತಪ್ಪಿಸುವ ಸಾಧ್ಯತೆ ಇದ್ದು, ಶಾಸಕರನ್ನು ಒಳಗೊಂಡ ಸಮಿತಿ ಮಾಡಬೇಕೆಂದು ಉತ್ತರಿಸುತ್ತಿದ್ದ ವೇಳೆ ಸಚಿವರಿಗೆ ಸಂಕನೂರ, ಭೋಜೆಗೌಡ, ಪುಟ್ಟಣ್ಣ ಮನವಿ ಮಾಡಿದರು.ಈ ವೇಳೆ ಶಾಸಕರನ್ನು ಒಳಗೊಂಡ ಸಮಿತಿ ರಚಿಸುವ ಭರವಸೆ ನೀಡಿದರು.

ಬಿಬಿಎಂಪಿಗೆ ಕೊನೆ ಕಂತು ಹಣ ಬಿಡುಗಡೆ:ಒಟ್ಟು 3 ಸಾವಿರ ಕೋಟಿ ಕೊಟ್ಟ ಸರ್ಕಾರ

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…