More

    ಶಿಕ್ಷಣ ಸಚಿವ ಮಧು ಬಂಗಾರಪ್ಪ ಜನ್ಮದಿನ; ಬುದ್ದಿಮಾಂಧ್ಯ ಮಕ್ಕಳಿಗೆ ಸಿಹಿ ವಿತರಣೆ

    ಸೊರಬ: ಮಾಜಿ ಸಿಎಂ ಎಸ್.ಬಂಗಾರಪ್ಪ ಅವರಂತೆ ಸದಾ ಬಡವರ ಪರ ಕಾಳಜಿ ಹೊಂದಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜನ ನಾಯಕರಾಗಿ, ಲಕ್ಷಾಂತರ ಅಭಿಮಾನಿ ಬಳಗ ಹೊಂದಿದ್ದಾರೆ ಎಂದು ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೆ.ಪಿ.ಪ್ರವೀಣ್‌ಕುಮಾರ್ ಹೇಳಿದರು.

    ಮಧು ಬಂಗಾರಪ್ಪ ಜನ್ಮದಿನದ ಅಂಗವಾಗಿ ಪಟ್ಟಣದ ಹೊಸಪೇಟೆ ಬಡಾವಣೆಯ ನವಚೇತನ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಶನಿವಾರ ಯುವ ಕಾಂಗ್ರೆಸ್ ಹಾಗೂ ಮಧು ಬಂಗಾರಪ್ಪ ಅಭಿಮಾನಿ ಬಳಗದಿಂದ ಮಕ್ಕಳಿಗೆ ಹಣ್ಣು, ಸಿಹಿ ವಿತರಿಸಿ ಮಾತನಾಡಿದರು.
    ಕ್ಷೇತ್ರದ ಜನತೆಯ ಆರೋಗ್ಯದ ದೃಷ್ಟಿಯಿಂದ ಬೃಹತ್ ಆರೋಗ್ಯ ಶಿಬಿರ ನಡೆಸಿದ್ದಾರೆ. ರೈತರ ಪರ ಹೋರಾಟ ಮಾಡಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ನಾಂದಿ ಹಾಡಿದ್ದಾರೆ. ಪ್ರಸ್ತುತ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರುವ ಮೂಲಕ ಗ್ರಾಮೀಣ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಸರ್ಕಾರಿ ಶಾಲೆಗಳ ಉಳಿವಿಗಾಗಿ ಪಣ ತೊಟ್ಟಿದ್ದಾರೆ. ಮಕ್ಕಳ ಭವಿಷ್ಯಕ್ಕಾಗಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ತಂದು ಯಾವ ಮಕ್ಕಳೂ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿದಂತೆ ಕ್ರಮ ಕೈಗೊಂಡಿದ್ದಾರೆ ಎಂದರು.
    ತಾಪಂ ಮಾಜಿ ಸದಸ್ಯ ಸುರೇಶ್ ಬಿಳವಾಣಿ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ, ಪುರಸಭೆ ಸದಸ್ಯೆ ಆಫ್ರೀನಾ ಮೆಹಬೂಬ್ ಬಾಷಾ, ತಾಪಂ ಮಾಜಿ ಸದಸ್ಯೆ ಜ್ಯೋತಿ ನಾರಾಯಣಪ್ಪ, ಪಪಂ ಮಾಜಿ ಉಪಾಧ್ಯಕ್ಷೆ ರತ್ನಮ್ಮ ನಾಗಪ್ಪ, ಪ್ರಮುಖರಾದ ಯಶೋದಾ, ಪ್ರಮೋದ್, ಶಾಂತಪ್ಪ, ಸಂಜಯ ದೇವತಿಕೊಪ್ಪ, ರವಿ ಕೇಸರಿ, ಪಾಂಡು ಕೊಡಕಣಿ, ರಾಘು, ಶಿವು, ಸಚಿನ್, ಸಿದ್ದೇಶ್, ಯಶೋಧರ, ಶಶಿಧರ, ಮಾಲತೇಶ ಹೆಗ್ಗೋಡು, ಸುನಿಲ್, ಶಿವಕುಮಾರ್ ಇತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts