ಮಧ್ಯಪ್ರದೇಶ ಬಿಕ್ಕಟ್ಟು ಕಾಂಗ್ರೆಸ್ ಪಕ್ಷದೊಳಗಿನ ಸಮಸ್ಯೆಯೇ ಹೊರತು, ಆಪರೇಷನ್ ಕಮಲ ಅಲ್ಲ- ಬಿಜೆಪಿ ಶಾಸಕ ವಿಶ್ವಾಸ್ ಸಾರಂಗ್

ಭೋಪಾಲ: ಮಧ್ಯಪ್ರದೇಶದಲ್ಲಿ ಸದ್ಯ ಸೃಷ್ಟಿಯಾಗಿರುವ ರಾಜಕೀಯ ಸನ್ನಿವೇಶ ಕಾಂಗ್ರೆಸ್ ಪಕ್ಷದೊಳಗಿನ ಸಮಸ್ಯೆಯೇ ಹೊರತು, ಇಲ್ಲಿ ಯಾವುದೇ ಆಪರೇಷನ್ ಕಮಲ ನಡೆದಿಲ್ಲ ಎಂದು ಬಿಜೆಪಿ ಶಾಸಕ ವಿಶ್ವಾಸ್ ಸಾರಂಗ್ ಹೇಳಿದ್ದಾರೆ. ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದೊಳಗೆ ಭಿನ್ನಮತ ಹೆಚ್ಚಾಗಿದೆ. ಕೆಲವೇ ಕೆಲವು ರಾಜಕಾರಣಿಗಳ ಸುತ್ತ ಸುತ್ತುತ್ತ ಸರ್ಕಾರ ನಡೆಸುವುದು ಸಾಧ್ಯವಿಲ್ಲ ಎಂಬುದು ಕಮಲನಾಥ್ ಮತ್ತು ಕಾಂಗ್ರೆಸ್​ ಗೆ ಮನವರಿಕೆ ಆಗಿರಬೇಕು. ಸರ್ಕಾರ ನಡೆಸುವ ವಿಚಾರದಲ್ಲಿ ಕಂಡುಬಂದಿರುವ ಭಿನ್ನಮತ ಈಗ ಬಹಿರಂಗವಾಗಿದೆ ಎಂದು ಸಾರಂಗ್ ವ್ಯಾಖ್ಯಾನಿಸಿದ್ದಾರೆ. … Continue reading ಮಧ್ಯಪ್ರದೇಶ ಬಿಕ್ಕಟ್ಟು ಕಾಂಗ್ರೆಸ್ ಪಕ್ಷದೊಳಗಿನ ಸಮಸ್ಯೆಯೇ ಹೊರತು, ಆಪರೇಷನ್ ಕಮಲ ಅಲ್ಲ- ಬಿಜೆಪಿ ಶಾಸಕ ವಿಶ್ವಾಸ್ ಸಾರಂಗ್