More

    ಮಡಿವಾಳ ಸಮುದಾಯಕ್ಕೆ ಸಿಗಲಿ ಆದ್ಯತೆ

    ಮಸ್ಕಿ: ರಾಯಚೂರು ನಗರ ಮತ್ತು ಚಿಕ್ಕಮಗಳೂರು ಜಿಲ್ಲೆಯ ತರಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರಿಗೆ ಟಿಕೆಟ್ ನೀಡಬೇಕೆಂದು ಮಡಿವಾಳ ಸಮಾಜದ ತಾಲೂಕು ಪ್ರಧಾನ ಕಾರ್ಯದರ್ಶಿ ದೇವರಾಜ ಮಡಿವಾಳ ಒತ್ತಾಯಿದರು.

    ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತರಿಕೇರಿ ಕ್ಷೇತ್ರದಲ್ಲಿ ಎಚ್.ಎಂ.ಗೋಪಾಲಕೃಷ್ಣ ಎರಡು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕಡಿಮೆ ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ. ರಾಯಚೂರು ನಗರ ಕ್ಷೇತ್ರದಲ್ಲಿ ಸಮುದಾಯದವರಿಗೆ ಟಿಕೆಟ್ ನೀಡಿದರೆ ಗೆಲ್ಲುವ ಭರವಸೆ ಇದೆ ಎಂದರು.

    ತುಮಕೂರಿನಲ್ಲಿ ಆಯೋಜಿಸಿದ್ದ ಮಡಿವಾಳ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ದು, ಮಡಿವಾಳ ಸಮುದಾಯದ ಇಬ್ಬರನ್ನು ಎಂಎಲ್‌ಸಿ ಮಾಡುವುದಾಗಿ ಭರವಸೆ ನೀಡಿದ್ದರು. ಎಂಎಲ್‌ಸಿ ಬದಲಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕೆಂದು ದೇವರಾಜ ಆಗ್ರಹಿಸಿದರು. ಪ್ರಮುಖರಾದ ಮಂಜುನಾಥ ಸಾಲಗುಂದ, ನಾಗರಾಜ ಹೂವಿನಭಾವಿ, ಕೆ.ದುರಗಪ್ಪ, ಮುದಿಯಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts