ಹುಬ್ಬಳ್ಳಿ: ಮಹಾದಾಯಿ ಯೋಜನೆ ಕಾಮಗಾರಿಗೆ ಯೋಜನೆ ರೂಪಿಸಲು ಶೀಘ್ರದಲ್ಲೇ ತಜ್ಞರ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರಿಗೆ ತಿಳಿಸಿದರು.
ಯೋಜನೆಗೆ ಬಗ್ಗೆ ನೋಟಿಫೀಕೇಷನ್ ಹೊರಡಿಸಲು ಸುಪ್ರೀಂ ಕೋರ್ಟ್ ಸೂಚಿಸಿತ್ತು. ಕೋರ್ಟ್ ಸೂಚಿಸಿದ ಒಂದು ವಾರದಲ್ಲೇ ನಾವು ನೋಟಿಫಿಕೇಷನ್ ಹೊರಡಿಸಿದ್ದೇವೆ. ಯೋಜನೆ ಬಗ್ಗೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬಜೆಟ್ನಲ್ಲಿ 400ರಿಂದ 500 ಕೋಟಿ ರೂಪಾಯಿ ಹಣವನ್ನು ಯೋಜನೆಗೆ ಮೀಸಲಿಡುವಂತೆ ಕೋರಿದ್ದೇನೆ. ಇದಕ್ಕೆ ಅವರು ಸ್ಪಂದಿಸಿದ್ದಾರೆ ಎಂದು ಹೇಳಿದರು.
ಪ್ರಧಾನಿಗಳು ಉತ್ತಮ ಕೆಲಸ ಮಾಡಿದ್ದಾರೆ.ಮಹದಾಯಿ ಯೋಜನೆ ಕಾಮಗಾರಿ ವಿಳಂಬವಾಗುವುದಿಲ್ಲ. ಏಕೆಂದರೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಅರಣ್ಯ ಇಲಾಖೆ ಜಮೀನು ಇಲ್ಲ. ಹೀಗಾಗಿ ತೊಡಕು ಸಂಭವಿಸುವುದಿಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹುಬ್ಬಳ್ಳಿ ಬಂದಾಗ ಮಹಾದಾಯಿ ಯೋಜನೆ ಸಮಸ್ಯೆ ಬಗೆ ಹರಿಸುವುದಾಗಿ ಹೇಳಿದ್ದರು. ಅದರಂತೆ ನಡೆದುಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು. (ದಿಗ್ವಿಜಯ ನ್ಯೂಸ್)