More

    ಅಧಿಕಾರ ದಾಹಕ್ಕಾಗಿ ಮಹಿಳೆ ಮೇಲೆ ದೌರ್ಜನ್ಯ

    ಮಹಾಲಿಂಗಪುರ: ವಿಶ್ವಕ್ಕೆ ಮಾದರಿಯಾದ ಸುಸಂಸ್ಕೃತ ದೇಶದಲ್ಲಿ ಬಿಜೆಪಿ ಆಡಳಿತದ ಅನೇಕ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ ಎಂದು ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಆಕ್ರೋಶ ವ್ಯಕ್ತಪಡಿಸಿದರು.

    ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷೆ ಚುನಾವಣೆ ವೇಳೆ ದೌರ್ಜನ್ಯಕ್ಕೆ ಒಳಗಾಗಿದ್ದ ಪುರಸಭೆ ಸದಸ್ಯೆ ಚಾಂದನಿ ನಾಯಕ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಅವರ ಪತಿ ನಾಗೇಶ ನಾಯಕ ಅವರಿಗೆ ಸಾಂತ್ವನ ಹೇಳಿ ಅವರು ಮಾತನಾಡಿದರು.

    ಸ್ಥಳೀಯ ಪುರಸಭೆ ಚುನಾವಣೆ ವೇಳೆ ಶಾಸಕರು ಜವಾಬ್ದಾರಿ ಸ್ಥಾನದಲ್ಲಿ ಇದ್ದು ರಕ್ಷಣೆ ನೀಡಬೇಕಾದ ಅವರೇ ಅಧಿಕಾರದ ದಾಹದಿಂದ ಗರ್ಭಿಣಿ ಮಹಿಳೆ ಮೇಲೆ ದುರ್ವರ್ತನೆ ತೋರಿದ್ದು ಇಡೀ ದೇಶವೇ ತಲೆ ತಗ್ಗಿಸುವಂತಹ ಘಟನೆ. ಇಷ್ಟಿದ್ದರೂ ಅವರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

    ಕಿಸಾನ್ ಕಾಂಗ್ರೆಸ್ ಸಂಚಾಲಕ ಸಿದ್ದು ಕೊಣ್ಣೂರ, ತೇರದಾಳ ಮತಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ, ನಗರ ಘಟಕದ ಅಧ್ಯಕ್ಷ ಈಶ್ವರ ಚಮಕೇರಿ, ರಬಕವಿ ಬನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಆರ್.ಹಟ್ಟಿ, ಕಾಂಗ್ರೆಸ್ ಮುಖಂಡರಾದ ದೇವರೇಶ ಉಳ್ಳಾಗಡ್ಡಿ, ಶಂಕರ ಸೊನ್ನದ, ಸಿರಾಜ್ ಪಾಂಡು ಮುಂತಾದವರು ಇದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts