ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೇರಿ 9 ಮಂದಿ ಗುರುವಾರ ರಾಜ್ಯ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾದರು.
ಸಿಎಂ ಉದ್ಧವ್ ಠಾಕ್ರೆ ವಿಧಾನ ಪರಿಷತ್ಗೆ ಆಯ್ಕೆಯಾಗುವುದರೊಂದಿಗೆ ಅವರ ಮುಖ್ಯಮಂತ್ರಿ ಹುದ್ದೆ ಗಟ್ಟಿಯಾಗಿದೆ.
ಆಯ್ಕೆಯಾದವರು: ವಿಧಾನಪರಿಷತ್ ಉಪ ಸಭಾಧ್ಯಕ್ಷೆ ನೀಲಂ ಗೋರೆ, (ಶಿವಸೇನಾ) ಬಿಜೆಪಿಯ ರಂಜಿತ್ಸಿಂಗ್ ಮೋಹಿತೆ ಪಾಟೀಲ್, ಗೋಪಿಚಂದ್ ಪಡಲ್ಕರ್, ಪ್ರವೀಣ್ ದಾಟೆ ಮತ್ತು ರಮೇಶ್ ಕರಾಡ್, ಎನ್ಸಿಪಿಯ ಅಮೋಲ್ ಮಿಟ್ಕರಿ ಹಾಗೂ ಕಾಂಗ್ರೆಸ್ನ ರಾಜೇಶ್ ರಾಥೋಡ್ ಅವರು ಅವಿರೋಧವಾಗಿ ಆಯ್ಕೆಯಾದರು.
ಇದನ್ನೂ ಓದಿ VIDEO| ಮರಿ ಆನೆ ಸಫಾರಿ ವಾಹನದಲ್ಲಿರುವವರನ್ನು ಹೇಗೆ ಬೆದರಿಸುತ್ತದೆ ನೋಡಿ !
ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾಗಿ ನೇಮಕಗೊಂಡ ನಂತರ 6 ತಿಂಗಳೊಳಗೆ ಶಾಸಕರಾಗಬೇಕಿತ್ತು. ಸಂವಿಧಾನದ ಪ್ರಕಾರ ಅವರು ಮೇ.27ರೊಳಗೆ ಶಾಸಕರಾಗಿ ಆಯ್ಕೆಯಾಬೇಕಿತ್ತು. ಇಲ್ಲದಿದ್ದರೆ ಅವರು ಮುಖ್ಯಮಂತ್ರಿ ಪಟ್ಟ ಕಳೆದುಕೊಳ್ಳಬೇಕಿತ್ತು.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕಳೆದ ತಿಂಗಳು ರಾಜ್ಯಪಾಲರಿಗೆ ಪತ್ರ ಬರೆದು ಶೀಘ್ರವೇ ಖಾಲಿಯಾಗಿರುವ ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಸುವಂತೆ ಮನವಿ ಮಾಡಿದ್ದರು. ಆದರೆ ರಾಜ್ಯಪಾಲರು ಕರೊನಾ ವೈರಸ್ ಸೋಂಕು ಹಾವಳಿ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಒಪ್ಪಿರಲಿಲ್ಲ. ಇದರಿಂದ ಪಟ್ಟ ಕಳೆದುಕೊಳ್ಳುವ ಭೀತಿಯಲ್ಲಿದ್ದ ಉದ್ಧವ್ ಠಾಕ್ರೆ ಪ್ರಧಾನಿ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಶೀಘ್ರವೇ ಚುನಾವಣೆ ನಡೆಸುವಂತೆ ಕೋರಿದ್ದರು. (ಏಜೆನ್ಸೀಸ್)