ಭೋಗೇನಾಗರಕೊಪ್ಪದಲ್ಲಿ ಬಸವಣ್ಣ ದೇವರ ಸಂಭ್ರಮದ ಮಹಾರಥೋತ್ಸವ

blank

ಕಲಘಟಗಿ: ಬನದ ಹುಣ್ಣಿಮೆ ನಿಮಿತ್ತ ತಾಲೂಕಿನ ಭೋಗೇನಾಗರಕೊಪ್ಪ ಗ್ರಾಮದ ಬಸವಣ್ಣ ದೇವರ (ನಂದೀಶ್ವರ) ಮಹಾ ರಥೋತ್ಸವ ಸೋಮವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಸೋಮವಾರ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀ ಬಸವಣ್ಣ ದೇವರ ಮಹಾಮೂರ್ತಿಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಪುಷ್ಪಾಲಂಕಾರ, ಮಹಾ ಮಂಗಳಾರುತಿ ಕಾರ್ಯಕ್ರಮಗಳು ವೈದಿಕ ಹಾಗೂ ದೇವಸ್ಥಾನ ಅರ್ಚಕರಿಂದ ಜರುಗಿದವು.

ಸಂಜೆ 4 ಗಂಟೆಗೆ ತೇರಿಗೆ ಹೂಮಾಲೆ, ರುದ್ರಾಕ್ಷಿ ಹಾಗೂ ತಳಿರು-ತೋರಣಗಳಿಂದ ಅಲಂಕರಿಸಿದ್ದ ತೇರಿಗೆ ಜಗ್ಗಲಗಿ, ಕುಂಭಮೇಳ, ಆನೆ ಅಂಬಾರಿ, ಭಜನೆ, ನಂದಿಕೋಲು, ವಿವಿಧ ವಾದ್ಯ ಮೇಳಗಳೊಂದಿಗೆ ಬಸವಣ್ಣ ದೇವರ ಉತ್ಸವ ಮೂರ್ತಿಯ ಮಹಾ ರಥೋತ್ಸವ ಸಂಭ್ರಮದಿಂದ ಜರುಗಿತು.

ಭಕ್ತರು ರಥೋತ್ಸವಕ್ಕೆ ಬಾಳೆ ಹಣ್ಣು, ಉತ್ತತ್ತಿ ಎಸೆದು ಭಕ್ತಿಭಾವ ಮೆರೆದರು.

Share This Article

ತಾಳಲಾರದ ಬೇಗೆ, ತಡೆಯುವುದು ಹೇಗೆ? ಎಸಿ, ಕೂಲರ್ ಈ ಎರಡರಲ್ಲಿ ಯಾವುದು ಬೆಸ್ಟ್​? ಇಲ್ಲಿದೆ ನೋಡಿ ಉತ್ತರ | Summer

Summer: ಇದು ಬೇಸಿಗೆ ಕಾಲ. ಕೇವಲ ಬೇಸಿಗೆ ಅಲ್ಲ ಮುಂದಿನ ಎರಡು ತಿಂಗಳಲ್ಲಿ ಬಿರು ಬೇಸಿಗೆ…

ಒಂದು ಪ್ರೀತಿಯ ಅಪ್ಪುಗೆ ಸಾಕು! ವಾಸಿ ಮಾಡುತ್ತೆ ನಾನಾ ಕಾಯಿಲೆ… hugging

hugging : ಫೆಬ್ರವರಿ 12 ರಂದು ಅಪ್ಪುಗೆಯ ದಿನ, ಅಂದರೆ ಪ್ರೀತಿಪಾತ್ರರನ್ನು ಅಪ್ಪಿಕೊಳ್ಳುವ ಮೂಲಕ ಅವರ…

ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್​ ಡ್ಯಾಮೇಜ್​ ಆಗುತ್ತದೆ! ಇಲ್ಲಿದೆ ನೋಡಿ ಅಚ್ಚರಿ ವರದಿ | Liver Health

Liver Health: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್​ ಕುಡಿಯುವುದು ಸಹ ಒಂದು…