ಬೆಂಗಳೂರು: ರಂಗು ರಂಗಿನ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ನ 15ನೇ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವೇದಿಕೆ ಸಜ್ಜಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ತಂಡಗಳು ಗೆಲುವಿಗಾಗಿ ಸೆಣಸಾಡಲಿವೆ. ಈ ಪಂದ್ಯವು ಆರ್ಸಿಬಿ ವರ್ಸಸ್ ಕನ್ನಡಿಗರು ಎಂಬಂತೆ ಪಾರ್ಪಟ್ಟಿದ್ದು ಅಂತಿಮವಾಗಿ ಗೆಲುವು ಯಾರ ಪಾಲಾಗಲಿದ ಎಂದು ಕಾದು ನೋಡಬೇಕಿದೆ.
ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತು ಒಂದರಲ್ಲಿ ಗೆದ್ದು ಪಾಯಿಂಟ್ಸ್ ಟೇಬಲ್ನಲ್ಲಿ 9ನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಪಂದ್ಯ ಮಹತ್ವದಾಗಿದ್ದು, ಪಾಯಿಂಟ್ಸ್ ಟೇಬಲ್ನಲ್ಲಿ ಮೇಲಕ್ಕೇರಬೇಕೆಂದರೆ ಆರ್ಸಿಬಿ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಸಿಎಸ್ಕೆ, ಪಂಜಾಬ್ ಮತ್ತು ಕೆಕೆಆರ್ ವಿರುದ್ಧ ಆರ್ಸಿಬಿ ನೀಡಿದ ಪ್ರದರ್ಶನ ಬೌಲಿಂಗ್ನಲ್ಲಿ ತೀರಾ ಕಳಪೆಯಾಗಿತ್ತು. ಹೀಗಾಗಿ ಇಂದಿನ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಆಗುವುದು ಖಚಿತ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿರುವ ಬ್ಯಾಟಿಂಗ್ ಸ್ನೇಹಿ ಪಿಚ್ಗಳ ಸ್ವರೂಪವನ್ನು ಗಮನಿಸಿದರೆ, ಆರ್ಸಿಬಿ ತಂಡಕ್ಕೆ ಬಲಿಷ್ಠ ಅನುಭವಿ ಬೌಲರ್ ಬೇಕಾಗಿದೆ. ಇದಕ್ಕೆ ಸಂಬಂಧಿಸಿದಂತೆ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.
ಇದನ್ನೂ ಓದಿ: IPL 2024; ಪ್ಲೇಆಫ್ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ ಜಂಬೋ
ಕಳೆದ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅಲ್ಝಾರಿ ಜೋಸೆಫ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 3.4 ಓವರ್ಗಳಲ್ಲಿ 38 ರನ್ ನೀಡಿದ್ದ ಅಲ್ಝಾರಿ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್ಗಳಲ್ಲಿ 43 ರನ್ ಬಿಟ್ಟುಕೊಟ್ಟಿದ್ದರು. ಇನ್ನು ಕೆಕೆಆರ್ ವಿರುದ್ಧ 2 ಓವರ್ಗಳಲ್ಲಿ 34 ರನ್ ಬಿಟ್ಟುಕೊಟ್ಟಿದ್ದರು. ಹೀಗಾಗಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಅಲ್ಝಾರಿ ಜೋಸೆಫ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ. ಅಲ್ಜಾರಿ ಜೋಸೆಫ್ ಬದಲಿಗೆ ರೀಸ್ ಟೋಪ್ಲಿ ಅಥವಾ ಲಾಕಿ ಫರ್ಗುಸನ್ಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ.
ಇನ್ನು ಬ್ಯಾಟಿಂಗ್ ವಿಭಾಗಕ್ಕೆ ಬರುವುದಾದರೆ ಕಳಪೆ ಫಾರ್ಮ್ನಲ್ಲಿರುವ ರಜತ್ ಪಾಟಿದಾರ್ ಬದಲಿಗೆ ಮಹಿಪಾಲ್ ಲೊಮ್ರೊರ್ ಅಥವಾ ಸುಯೇಶ್ ಪ್ರಭುದೇಸಾಯಿಗೆ ತಂಡದಲ್ಲಿ ಸ್ಥಾನ ದೊರೆಯಬಹುದು ಎಂದು ಹೇಳಲಾಗಿದೆ. ಅಂತಿಮವಾಗಿ ನಾಯಕ ಫಾಫ್ ಡು ಪ್ಲೆಸಿಸ್ ಲಖನೌ ವಿರುದ್ಧದ ಪಂದ್ಯಕ್ಕೆ ತಂಡದಲ್ಲಿ ತಾರಿಗೆಲ್ಲಾ ಸ್ಥಾನ ಕೊಡಲಿದ್ದಾರೆ ಎಂದು ಕಾದು ನೋಡಬೇಕಿದೆ.