ರಟ್ಟಿಹಳ್ಳಿ: ಪ್ರತಿಯೊಬ್ಬರೂ ಶಿಕ್ಷಣವಂತರಾಗಲೆಂದು ಸರ್ಕಾರ ಅನೇಕ ಯೋಜನೆ ಜಾರಿಗೆ ತಂದಿದೆ. ಮಕ್ಕಳು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆದುಕೊಳ್ಳಬೇಕು ಎಂದು ಎಸ್ಡಿಎಂಸಿ ಅಧ್ಯಕ್ಷ ಕರಿಯಪ್ಪ ಚೌಡಕ್ಕನವರ ಹೇಳಿದರು.
ತಾಲೂಕಿನ ಕುಡಪಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯರಿಗೆ ಸಮವಸ್ತ್ರ, ಶ್ಯೂ, ಸಾಕ್ಸ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಾಥಮಿಕ ಹಂತದಲ್ಲಿರುವಾಗಲೇ ಮಕ್ಕಳು ಉತ್ತಮ ಶಿಕ್ಷಣ ಪಡೆದರೆ ಮುಂದಿನ ಶಿಕ್ಷಣಕ್ಕೆ ಅನುಕೂಲವಾಗುತ್ತದೆ. ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಎಸ್ಡಿಎಂಸಿ ಸದಸ್ಯರಾದ ಪ್ರಿಯಾಂಕಾ ಕುಸಗೂರು, ಕವಿತಾ ಡಮ್ಮಳ್ಳಿ, ಮುಖ್ಯ ಶಿಕ್ಷಕಿ ಜಿ.ಎಂ. ಮೆಣಸಿನಕಾಯಿ, ಶಿಕ್ಷಕರಾದ ಜಿ.ಎನ್. ಕಲ್ಡೆಣ್ಣನವರ, ಹಸೀನಾ ಬೇಲಿಮನಿ, ಸುವರ್ಣಾ ಹೊಸಮನಿ, ಎಸ್.ಬಿ. ಬಣಕಾರ, ಇತರರಿದ್ದರು.