More

    ಮಳಲಿ ಬಿಲ್ಲವ ಸೇವಾ ಸಂಘ ಉದ್ಘಾಟನೆ ಆಮಂತ್ರಣ ಬಿಡುಗಡೆ

    ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಮಾಜ ಸೇವಾ ಸಂಘ ಮಳಲಿ ವಲಯದ ಉದ್ಘಾಟನೆ ಮತ್ತು ಪದಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಭಾನುವಾರ ಬಿಡುಗಡೆಗೊಳಿಸಿದರು.

    ಸಂಘದ ನಿಯೋಜಿತ ಗೌರವಾಧ್ಯಕ್ಷರಾದ ವಿಶ್ವನಾಥ ಪೂಜಾರಿ, ಯೋಗೀಶ್ ಪೂಜಾರಿ, ಹರೀಶ್ಚಂದ್ರ ಬಿರಾವು, ನಿಯೋಜಿತ ಅಧ್ಯಕ್ಷ ಕೇಶವ ಪೂಜಾರಿ ಮಟ್ಟಿ, ನಿಯೋಜಿತ ಉಪಾಧ್ಯಕ್ಷ ಸದಾನಂದ ಪೂಜಾರಿ, ಕಾರ್ಯದರ್ಶಿ ಸಚಿನ್ ಸಾಲ್ಯಾನ್ ಮಟ್ಟಿ, ಕೋಶಾಧಿಕಾರಿ ಮೋಹನದಾಸ್, ಜತೆ ಕೋಶಾಧಿಕಾರಿ ದಯಾನಂದ ಪೂಜಾರಿ ಮಳಲಿ ಸೈಟ್, ಸಂಘಟನಾ ಕಾರ್ಯದರ್ಶಿ ನೀಲಯ್ಯ ಪೂಜಾರಿ, ಮಹಿಳಾ ಘಟಕದ ನಿಯೋಜಿತ ಕಾರ್ಯದರ್ಶಿ ವಾಣಿ ಕೈಕಂಬ, ಪ್ರಮುಖರಾದ ಸದಾಶಿವ ಕರ್ಕೇರ, ಬಿಲ್ಲವ ಬ್ರಿಗೇಡ್‌ನ ಪ್ರಜ್ವಲ್ ದಂಡೆಕೇರಿ, ಕೃಷ್ಣ ಶಾಂತಿ, ರೂಪೇಶ್ ಶಾಂತಿ, ಚಂದ್ರಹಾಸ ಶಾಂತಿ ಮೊದಲಾವರಿದ್ದರು.

    ಡಿ.25ರಂದು ಉದ್ಘಾಟನೆ: ನೂತನ ಸಂಘವನ್ನು ಡಿ.25ರಂದು ಬೆಳಗ್ಗೆ 10.30ಕ್ಕೆ ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಉದ್ಘಾಟಿಸುವರು. ಸಭಾ ಕಾರ್ಯಕ್ರಮದಲ್ಲಿ ಆರ್ಯ ಈಡಿಗ ಮಹಾಸಂಸ್ಥಾನ ಮಠ ಸೋಲೂರು ಮಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಸಂಘದ ನಿಯೋಜಿತ ಅಧ್ಯಕ್ಷ ಕೇಶವ ಪೂಜಾರಿ ಅಧ್ಯಕ್ಷತೆ ವಹಿಸುವರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪದ ಪ್ರದಾನ ಮಾಡುವರು. ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿ ಸಮಿತಿ ಅಧ್ಯಕ್ಷ ಚಿತ್ತರಂಜನ್ ಗರೋಡಿ ಮೊದಲಾದವರು ಪಾಲ್ಗೊಳ್ಳುವರು. ಸಂಜೆ 6.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಕ್, ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಶ್ರೀ ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಗೆಜ್ಜೆಗಿರಿ ಕ್ಷೇತ್ರದ ನಿಕಟಪೂರ್ವ ಅಧ್ಯಕ್ಷ ಜಯಂತ್ ನಡುಬೈಲು ಮೊದಲಾದವರು ಉಪಸ್ಥಿತರಿರುವರು.

     

    ಯಕ್ಷಗಾನ ಬಯಲಾಟ: ಅಂದು ಬೆಳಗ್ಗೆ 9 ಗಂಟೆಗೆ ಮಳಲಿ ಮಟ್ಟಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದವರೆಗೆ ಬ್ರಹ್ಮಶ್ರೀ ನಾರಾಯಣ ಗುರು ಭಾವಚಿತ್ರದ ಮೆರವಣಿಗೆ, 10.30ಕ್ಕೆ ಗುರುಪೂಜೆ, ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ, ರಾತ್ರಿ 9.30ಕ್ಕೆ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಜರುಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts