More

    ಭಾರತದ ಬಹಿಷ್ಕಾರಕ್ಕೆ ಬೆಚ್ಚಿ ಚೀನಾ ಮೊರೆ ಹೋದ ಮಾಲ್ಡೀವ್ಸ್!

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ವಿರುದ್ಧ ಮಾಲ್ಡೀವ್ಸ್ ಸಚಿವರು ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಭಾರತೀಯರ ಬಹಿಷ್ಕಾರದ ಬಿಸಿಯಿಂದಾಗಿ ಮಾಲ್ಡೀವ್ಸ್ ಪ್ರವಾಸೋದ್ಯಮದ ಆದಾಯಕ್ಕೆ ಈಗ ಭಾರೀ ಪೆಟ್ಟು ಬಿದ್ದಿದ್ದು, ಇದರಿಂದ ಬೆಚ್ಚಿಬಿದ್ದಿರುವ ಮಾಲ್ಡೀವ್ಸ್​ ಇದೀಗ ಚೀನಾ ಮೊರೆ ಹೋಗಿದೆ.

    ಇದನ್ನೂ ಓದಿ: ಉಡುಪಿ ಅಷ್ಟಮಠ ಪರ್ಯಾಯ ಮಹೋತ್ಸವ ತಡೆಗೆ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್​

    ಮಾಲ್ಡೀವ್ಸ್ ಅವಹೇಳನಕಾರಿ ಟ್ವೀಟ್ ಮಾಡಿದ ಸಚಿವರನ್ನು ವಜಾ ಮಾಡಿತ್ತು. ಆದರೂ ಭಾರತದ ಬಹಿಷ್ಕಾರ ಯೋಜನೆಯಿಂದಾಗಿ ಮಾಲ್ಡೀವ್ಸ್ ಗೆ ಬುಕಿಂಗ್ ಆಗಿದ್ದ ಅನೇಕ ಪ್ರವಾಸ ಪ್ಯಾಕೇಜ್ ಗಳು, ವಿಮಾನ ಟಿಕೆಟ್ ಗಳು ರದ್ದಾಗಿದ್ದು, ಇದರಿಂದ ಆತಂಕಕ್ಕೀಡಾಗಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮೊಯಿಝು ಚೀನಾಕ್ಕೆ ಭೇಟಿ ನೀಡುತ್ತಿದ್ದಾರೆ.

    ಚೀನಾಗೆ ಮಾಲ್ಡೀವ್ಸ್ ಅಧ‍್ಯಕ್ಷರ ಸಾಮಾನ್ಯ ಭೇಟಿ ಇದು ಎಂದು ಮಾಲ್ಡೀವ್ಸ್​ ಸರ್ಕಾರ ಹೇಳುತ್ತಿದ್ದರೂ, ಭಾರತದ ಜೊತೆಗೆ ಸಂಬಂಧ ಹಳಸಿರುವ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಕತ್ತಿಮಸೆಯುವ ಚೀನಾ ಜತೆ ಕೈಜೋಡಿಸಿ ನಷ್ಟ ಬರಿಸಿಕೊಳ್ಳಲು ಮುಂದಾಗಿದೆ. ಇದೀಗ ಮಾಲ್ಡೀವ್ಸ್ ಅಧ‍್ಯಕ್ಷರ ಭೇಟಿ ಕುತೂಹಲ ಮೂಡಿಸಿದೆ.

    ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರ ಬಗ್ಗೆ ಮತ್ತು ಭಾರತೀಯರ ಬಗ್ಗೆ ಮಾಲ್ಡೀವ್ಸ್​ ಸಚಿವರು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಭಾರತ ವಿರೋಧಿ ಹೇಳಿಕೆ ನೀಡಿದ ಬೆನ್ನಲ್ಲೇ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ಸುರೇಶ್ ರೈನಾ, ಆಕಾಶ್ ಚೋಪ್ರಾ, ಇರ್ಫಾನ್ ಪಠಾಣ್, ನಟ ಸಲ್ಮಾನ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಅನೇಕರು ಮಾಲ್ಡೀವ್ಸ್ ಬಹಿಷ್ಕಾರದ ಅಭಿಯಾನಕ್ಕೆ ಬೆಂಬಲ ಘೋಷಿಸಿ ಟ್ವೀಟ್ ಮಾಡಿದ್ದರು.

    ಕೆಆರ್‌ಎಸ್‌ ಸುತ್ತ 30 ಕಿಮೀ ವ್ಯಾಪ್ತೀಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್‌ ತೀರ್ಪು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts