ಚಾಮರಾಜನಗರ: ಸಿಬ್ಬಂದಿಯ ಕಣ್ತಪ್ಪಿನಿಂದಾಗಿ ಪ್ರಸಾದದ ಜೊತೆಗೆ 2 ಲಕ್ಷ ರೂಪಾಯಿ ಭಕ್ತನ ಪಾಲಾಗಿರುವ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ನಡೆದಿದೆ.
ವಿಶೇಷ ದರ್ಶನಕ್ಕೆ ಟಿಕೆಟ್ ನೀಡಲು ಸಿಬ್ಬಂದಿ ಕುಳಿತಿದ್ದ. ಈ ವೇಳೆ ಭಕ್ತನೊಬ್ಬನಿಗೆ ಲಾಡು ಜತೆಗೆ ಹಣದ ಚೀಲವನ್ನು ನೀಡಿದ್ದಾನೆ. ಲಾಡು ಪ್ರಸಾದ ಇಟ್ಟಿದ್ದ ಬ್ಯಾಗ್ ಸಮೀಪವೇ ಹಣದ ಚೀಲವನ್ನು ಇಡಲಾಗಿತ್ತು. ಅದರ ಬಗ್ಗೆ ಗೊತ್ತಿಲ್ಲದೆ ಪ್ರಸಾದದ ಪ್ಯಾಕೆಟ್ ಜತೆಗೆ ಹಣದ ಚೀಲವನ್ನು ಸಿಬ್ಬಂದಿ ನೀಡಿದ್ದಾನೆ.
ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಜನದಟ್ಟಣೆ ಹೆಚ್ಚಾಗಿದ್ದರಿಂದ ಗಾಬರಿಯಲ್ಲಿ ದೇವಸ್ಥಾನದ ಸಿಬ್ಬಂದಿ ಯಾಮಾರಿದ್ದಾರೆ. ಈ ವಿಚಾರ ತಿಳಿದು ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಮಲೆಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. (ದಿಗ್ವಿಜಯ ನ್ಯೂಸ್)
VIDEO| ವಿದ್ಯಾರ್ಥಿಯನ್ನು ದುರ್ಬಳಕೆ ಮಾಡಿಕೊಂಡ ಶಿಕ್ಷಕಿ: ತರಗತಿಯೊಳಗೆ ನಡೆಯಿತು ದುರ್ವರ್ತನೆ
ಕಟ್ಟಿಗೆ ತರಲು ಕಾಡಿಗೆ ಹೋದ ಮಹಿಳೆಗೆ ಸಿಕ್ಕಿತು ವಜ್ರ! ಆಕೆಯ ಖುಷಿಗೆ ಪಾರವೇ ಇಲ್ಲ…