ಏಕತೆ, ಒಗ್ಗಟ್ಟು ಅತ್ಯಗತ್ಯ… ತುರ್ತು ಅಧಿವೇಶನ ಕರೆಯಲು ಪ್ರಧಾನಿಗೆ ಪತ್ರದ ಬರೆದ ಮಲ್ಲಿಕಾರ್ಜುನ ಖರ್ಗೆ! Mallikarjun Kharge

Mallikarjun Kharge

Mallikarjun Kharge : ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ತುರ್ತಾಗಿ ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯುವಂತೆ ಕೋರಿ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಏಕತೆ ಮತ್ತು ಒಗ್ಗಟ್ಟು ಅತ್ಯಗತ್ಯವಾದ ಈ ಕ್ಷಣದಲ್ಲಿ, ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯುವುದು ಮುಖ್ಯ ಎಂದು ವಿರೋಧ ಪಕ್ಷಗಳು ನಂಬುತ್ತವೆ ಎಂದು ಖರ್ಗೆ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

2025, ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ನಾಗರಿಕರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿಯನ್ನು ಎದುರಿಸುವ ನಮ್ಮ ಸಾಮೂಹಿಕ ಸಂಕಲ್ಪ ಮತ್ತು ಇಚ್ಛಾಶಕ್ತಿಯ ಪ್ರಬಲ ಪ್ರದರ್ಶನವಾಗಲಿದೆ. ಹೀಗಾಗಿ ಅಧಿವೇಶನವನ್ನು ಅದಕ್ಕೆ ತಕ್ಕಂತೆ ಕರೆಯಬೇಕಿದೆ ಎಂದು ನಾವು ಭಾವಿಸುತ್ತೇವೆ ಎಂದು ಖರ್ಗೆ ಅವರು ಹೇಳಿದ್ದಾರೆ.

ಇದನ್ನೂ ಓದಿ: ಈ 3 ರಾಶಿಯ ಮಹಿಳೆಯರು ಆದರ್ಶ ಪತ್ನಿ ಹೊಂದಿರಬೇಕಾದ ಎಲ್ಲ ಗುಣಗಳನ್ನು ಹೊಂದಿರುತ್ತಾರಂತೆ! Zodiac Signs

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಅಮಾನವೀಯ ಭಯೋತ್ಪಾದಕ ದಾಳಿಯನ್ನು ಇಡೀ ಜಗತ್ತು ಖಂಡಿಸಿದೆ. ಏಪ್ರಿಲ್​ 22ರಂದು ನಡೆದ ಈ ಕೃತ್ಯದಲ್ಲಿ 26 ಪ್ರವಾಸಿಗರು ಮೃತಪಟ್ಟರು. ಇದರಲ್ಲಿ ಪಾಕಿಸ್ತಾನ ಕೈವಾಡ ಇರುವುದರಿಂದ ಭಾರತ, ಪಾಕ್​ ವಿರುದ್ಧ ಆಕ್ರೋಶ ಹೊರಹಾಕಿದೆ. ಅಲ್ಲದೆ, ರಾಜತಾಂತ್ರಿಕವಾಗಿ ಅನೇಕ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಇತ್ತ ಪಾಕ್​ ಕೂಡ ಭಾರತದ ವಿರುದ್ಧ ಕ್ರಮಗಳನ್ನು ಕೈಗೊಂಡಿದೆ. ಉಭಯ ದೇಶಗಳ ನಡುವಿನ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಯುದ್ಧದ ಭೀತಿ ಆವರಿಸಿದೆ. ಈ ಸಂದರ್ಭದಲ್ಲಿ ಏಕತೆಯನ್ನು ಪ್ರದರ್ಶಿಸಬೇಕಾಗಿರುವುದರಿಂದ ತುರ್ತು ಅಧಿವೇಶನ ಕರೆಯಲು ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. (ಏಜೆನ್ಸೀಸ್​)

ಭಾರತದ ವಿಚಾರದಲ್ಲಿ ಎಚ್ಚರದಿಂದಿರಿ… ಪಾಕ್​ ಪ್ರಧಾನಿಗೆ ವಾರ್ನಿಂಗ್​ ಕೊಟ್ಟ ಮಾಜಿ ಪ್ರಧಾನಿ ನವಾಜ್ ಷರೀಫ್! Nawaz Sharif

ಜಗತ್ತಿನ ಮೊದಲ ಮಾನವ ಯಾವ ದೇಶದಲ್ಲಿ ಜನಿಸಿದನೆಂದು ನಿಮಗೆ ತಿಳಿದಿದೆಯೇ? ಇಲ್ಲಿದೆ ನೋಡಿ ಉತ್ತರ… World First Man

Share This Article

ವೈರಲ್ ಆಗುತ್ತಿರುವ ಬೀಟ್‌ರೂಟ್ ಗಂಜಿ, ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ: ನೀವು ಒಮ್ಮೆ ಟ್ರೈ ಮಾಡಿ | Beetroot Porridge

Beetroot Porridge: ಬೀಟ್‌ರೂಟ್‌ ಗಂಜಿ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಸಖತ್​​ ವೈರಲ್​ ಆಗುತ್ತಿದೆ. ಈ ಬೀಟ್‌ರೂಟ್…

ನೀವು ಗ್ಯಾಸ್ಟ್ರಿಕ್, ಅಸಿಡಿಟಿ, ಅಜೀರ್ಣ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಾದರೆ ನೀವು ಈ ಸಲಹೆಗಳನ್ನು ಅನುಸರಿಸಲೇಬೇಕು…Acidity

Acidity: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಬಳಲುತ್ತಿರುವ ಸಮಸ್ಯೆಗಳಲ್ಲಿ ಗ್ಯಾಸ್ಟ್ರಿಕ್, ಅಸಿಡಿಟಿ, ಅಜೀರ್ಣ. ಇದಕ್ಕಾಗಿ ಹಲವು…

ಸ್ನಾನ ಮಾಡುವಾಗ ಮೂತ್ರ ವಿಸರ್ಜಿಸುವುದು ಅಪಾಯಕಾರಿಯೇ? ಇಲ್ಲಿದೆ ಉಪಯುಕ್ತ ಮಾಹಿತಿ… Urinating

Urinating : ನಮ್ಮ ದೇಹದಿಂದ ತ್ಯಾಜ್ಯವನ್ನು ಹೊರಹಾಕುವಲ್ಲಿ ಮೂತ್ರವು ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ, ನಮ್ಮ…