ಪಶ್ಚಿಮ ಬಂಗಾಳ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದೇಶವ್ಯಾಪಿ ಭಕ್ತರು ತೀವ್ರ ಕಾತರದಿಂದ ಕಾಯುತ್ತಿದ್ದು, ರಾಮನ ದರ್ಶನ ಪಡೆಯಲು ಸಕಲ ತಯಾರಿಗಳನ್ನು ಮಾಡಿಕೊಂಡಿದ್ದಾರೆ. ಉದ್ಘಾಟನೆ ದಿನದಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿ ಗಣ್ಯರು ಸಮಾರಂಭಕ್ಕೆ ಆಗಮಿಸಲಿದ್ದಾರೆ. ಆದ್ರೆ, ಇದೀಗ ಮೂಲಗಳ ಪ್ರಕಾರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಅವರ ಪಕ್ಷದ ಸದಸ್ಯರು ಬರುವುದು ಅನುಮಾನ ಎಂದು ಹೇಳಲಾಗಿದೆ.
ಇದನ್ನೂ ಓದಿ: ಜ.22ಕ್ಕೆ ಅಯೋಧ್ಯೆ ರಾಮ ಮಂದಿರದಲ್ಲಿ ತೆರೆಯಲಿವೆ ಹೈದರಾಬಾದ್ನ 118 ಬಾಗಿಲು?
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆಗೆ ಹಾಜರಾಗದಿರಲು ಮಮತಾ ಬ್ಯಾನರ್ಜಿ ನಿರ್ಧರಿಸಿದ್ದು, ಅವರ ನೇತೃತ್ವದಲ್ಲಿರುವ ತೃಣಮೂಲ ಕಾಂಗ್ರೆಸ್ (TMC) ಕೂಡ ಸಮಾರಂಭಕ್ಕೆ ಯಾವುದೇ ಪ್ರತಿನಿಧಿಯನ್ನು ಕಳುಹಿಸುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.
ಈ ನಿರ್ಧಾರವನ್ನು ಟಿಎಂಸಿ ಅಧಿಕೃತವಾಗಿ ಪ್ರಕಟಿಸದಿದ್ದರೂ, ಆಡಳಿತಾರೂಢ ಬಿಜೆಪಿಯ ರಾಜಕೀಯ ನಿರೂಪಣೆಗೆ ಪಕ್ಷವು ಸೆಳೆಯಲ್ಪಡುವ ಬಗ್ಗೆ ಎಚ್ಚರದಿಂದಿದೆ ಎಂದು ಬ್ಯಾನರ್ಜಿಯವರಿಗೆ ನಿಕಟವಾಗಿರುವ ಪಕ್ಷದ ಮೂಲಗಳು ಖಚಿತಪಡಿಸಿವೆ. 2024ರ ಲೋಕಸಭೆಯ ಪ್ರಚಾರಕ್ಕಾಗಿ ರಾಮಮಂದಿರ ಉದ್ಘಾಟನೆಯನ್ನು ಸ್ಪ್ರಿಂಗ್ಬೋರ್ಡ್ನಂತೆ ಬಳಸಿಕೊಳ್ಳಲು ಬಿಜೆಪಿ ನೋಡುತ್ತಿದೆ ಎಂದು ಪಕ್ಷ ಬಲವಾಗಿ ನಂಬಿದೆ!
ಇದನ್ನೂ ಓದಿ: ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಾಗಾರ
ರಾಮ ಮಂದಿರ ಟ್ರಸ್ಟ್ ಎಲ್ಲಾ ಮುಖ್ಯಮಂತ್ರಿಗಳು ಮತ್ತು ಪ್ರಮುಖ ವಿರೋಧ ಪಕ್ಷದ ವ್ಯಕ್ತಿಗಳಿಗೂ ಸಮಾರಂಭಕ್ಕೆ ಆಹ್ವಾನ ನೀಡಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮುನ್ನೆಲೆಗೆ ಬಂದಿದೆ. ಇದಕ್ಕೂ ಮುನ್ನ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ರಾಮ ಮಂದಿರದ ಉದ್ಘಾಟನಾ ಸಮಾರಂಭದ ಆಹ್ವಾನವನ್ನು ತಿರಸ್ಕರಿಸಿದ್ದು, “ಧರ್ಮವು ಒಂದು ವೈಯಕ್ತಿಕ ಆಯ್ಕೆ! ರಾಜಕೀಯ ಲಾಭಕ್ಕೋಸ್ಕರ ಅದನ್ನು ಸಾಧನವಾಗಿ ಪರಿವರ್ತಿಸಿಕೊಳ್ಳಬಾರದು” ಎಂದು ಹೇಳಿದ್ದಾರೆ.
ಜನವರಿ 22 ರಂದು ಹೊಸದಾಗಿ ನಿರ್ಮಿಸಲಾದ ರಾಮಮಂದಿರ ಉದ್ಘಾಟನೆ ಅದ್ದೂರಿಯಾಗಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು 6,000ಕ್ಕೂ ಅಧಿಕ ಜನರು ಈ ಭವ್ಯವಾದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).
‘ಸಲಾರ್’ vs ‘ಡಂಕಿ’: ಬಾಕ್ಸ್ ಆಫೀಸ್ನಲ್ಲಿ ಯಾರು ಮೇಲುಗೈ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್