ಮುಂಬೈ: ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ರೋಗಿಗಳಿಗೆ ಚಿಕಿತ್ಸೆ ಕೊಡುವುದಕ್ಕೆ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಕರ್ತವ್ಯನಿರತ ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ದುಷ್ಕೃತ್ಯ ಮೆರೆದಿದ್ದಾನೆ.
ಮಹಾರಾಷ್ಟ್ರದ ನಾಂದೇಡ್ ಜಿಲ್ಲಾಸ್ಪತ್ರೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಭೌಸಾಹೇಬ್ ಗಾಯ್ಕವಾಡ್ ಹೆಸರಿನ ವ್ಯಕ್ತಿಯ ಸಂಬಂಧಿಯೊಬ್ಬರಿಗೆ ಕರೊನಾ ಸೋಂಕು ದೃಢವಾಗಿದ್ದು, ಅವರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಮಾತನಾಡಿಸುವ ನಿಟ್ಟಿನಲ್ಲಿ ಭೌಸಾಹೇಬ್ ಏಪ್ರಿಲ್ 20ರಂದು ಆಸ್ಪತ್ರೆಗೆ ಬಂದಿದ್ದಾನೆ. ಅಲ್ಲಿ ರೋಗಿಯೊಂದಿಗೆ ಜೋರಾಗಿ ಮಾತನಾಡಲಾರಂಭಿಸಿದ್ದಾನೆ. ಈ ಸಮಯದಲ್ಲಿ ಇತರ ರೋಗಿಗಳನ್ನು ಭೇಟಿ ಮಾಡಲು ಅವರ ಸಂಬಂಧಿಗಳು ಬಂದಿದ್ದು, ಇವರ ಜೋರಾದ ಮಾತಿನಿಂದಾಗಿ ಅವರಿಗೆ ತೊಂದರೆಯಾಗಿದೆ. ಸಣ್ಣ ಮಾತನಾಡುವಂತೆ ಅವರಲ್ಲಿ ಮನವಿ ಮಾಡಿದ್ದಾರೆ. ಆದರೆ ಅದಕ್ಕೆ ಸಿಟ್ಟಿಗೆದ್ದ ಭೌಸಾಹೇಬ್ ಅವರೊಂದಿಗೆ ಜಗಳಕ್ಕೆ ಇಳಿದಿದ್ದಾನೆ.
ಕೋವಿಡ್ ವಾರ್ಡ್ನಲ್ಲಿ ಜಗಳ ಹೆಚ್ಚಾದ ಹಿನ್ನೆಲೆಯಲ್ಲಿ ವೈದ್ಯರೊಬ್ಬರು ಮಧ್ಯಪ್ರವೇಶಿಸಿದ್ದಾರೆ. ಆಗ ಭೌಸಾಹೇಬ್ ವೈದ್ಯರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ವೈದ್ಯರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಈ ವಿಚಾರವಾಗಿ ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. (ಏಜೆನ್ಸೀಸ್)
ಟಿಕ್ಟಾಕ್ ಸ್ಟಾರ್ ಫನ್ ಬಕೆಟ್ ಭಾರ್ಗವನ ಬಗ್ಗೆ ಶಾಕಿಂಗ್ ಸಂಗತಿಗಳನ್ನು ಬಿಚ್ಚಿಟ್ಟ ಯುವತಿ..!
ಕ್ರೀಡಾ ಪಟುಗಳಿಗೆ ಭರ್ಜರಿ ಅವಕಾಶ: ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ 220 ಹುದ್ದೆಗಳಿಗೆ ಆಹ್ವಾನ