ಜೈಪುರ: ಮಾವಿನ ಕಾಯಿ ಕೀಳುತ್ತಿದ್ದ ಎಂಬ ಆರೋಪದ ಮೇಲೆ ವ್ಯಕ್ತಿ ಒಬ್ಬನನ್ನು ಅಮಾನುಷವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಸೂರಜ್ ಕರಣ್ ಮೀನಾ ಮೃತ ದುರ್ದೈವಿ ಎಂದು ತಿಳಿದು ಬಂದಿದ್ದು ಘಟನೆ ಸಂಬಂಧ 5 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾವಿನಕಾಯಿ ಕಿತ್ತಿದ್ದಕ್ಕೆ ಕೊಲೆ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಪ್ರತ್ಯಕ್ಷದರ್ಶಿ ಮಹಾವೀರ್ ಮಾವಿನ ಕಾಯಿ ಕೀಳುತ್ತಿದ್ದ ಎಂವ ಕಾರಣಕ್ಕೆ ಅವನ ಮೇಲೆ ಅಮಾನುಷವಾಗಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದರು.
ನಂದಲಾಲ್ ಬೈರ್ಯ ಎಂಬುವವರ ಜಮೀನಲ್ಲಿ ಇದ್ದ ಮಾವಿನ ಮರದಿಂದ ಹಣ್ಣನ್ನು ಕೀಳಲು ಯತ್ನಿಸಿದ್ದಾರೆ. ಈ ವೇಳೆ ಆಗಮಿಸಿದ ಬೈರ್ಯ ಹಾಗೂ ಮೀನಾ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ.
ಇದನ್ನೂ ಓದಿ: ಸೈಕ್ಲೋನ್ ಎಫೆಕ್ಟ್ನಿಂದ ರಾಜ್ಯದಲ್ಲಿ ಮೇ 8ರಿಂದ ಮಳೆ ಚುರುಕು
ಈ ವೇಳೆ ನಂದಲಾಲ್ ತನ್ನ ಸಂಬಂಧಿಕರನ್ನು ಕರೆಸಿಕೊಂಡು ಮೀನಾರನ್ನು ಬೈಕಿನಲ್ಲಿ ರೊಲಾನ ಗ್ರಾಮಕ್ಕೆ ಕರೆದೊಯ್ದು ದೊಣ್ಣೆಯಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ.
ಘಟನೆ ಕುರಿತು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಮಹಾವೀರ್ ತಿಳಿಸಿದ್ದಾರೆ.