ಹಾಸನ: ಕಾಡುಪ್ರಾಣಿಯನ್ನು ಕಂಡರೆ ಹೆದರಿ ಓಡಿ ಹೋಗುವವರೇ ಅಧಿಕ. ಆದರೆ ಇಲ್ಲೊಬ್ಬ ಹಾಗೆ ಮಾಡದೆ ಸಾಹಸ ಮೆರೆದಿದ್ದಾನೆ. ಚಿರತೆಯೊಂದನ್ನು ಹಿಡಿದಿದ್ದಲ್ಲದೆ ಅದನ್ನು ತನ್ನ ಬೈಕ್ ಹಿಂಭಾಗಕ್ಕೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಯವರಿಗೆ ತೆಗೆದುಕೊಂಡು ಹೋಗಿ ಒಪ್ಪಿಸಿದ್ದಾನೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಬಾಗಿವಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವೇಣುಗೋಪಾಲ್ ಅಲಿಯಾಸ್ ಮುತ್ತು ಈ ಸಾಹಸ ಮಾಡಿದ್ದಾನೆ. ಇದನ್ನು ಸ್ಥಳೀಯರು ವಿಡಿಯೋ ಮಾಡಿಕೊಂಡಿದ್ದು ಎಲ್ಲೆಡೆ ಹರಿದಾಡಲು ಆರಂಭಿಸಿದೆ.
ವೇಣುಗೋಪಾಲ್ ಬೆಳಗ್ಗೆ ತಮ್ಮ ಜಮೀನಿಗೆ ಹೋಗಿದ್ದಾಗ ಚಿರತೆ ಕಾಣಿಸಿಕೊಂಡಿತ್ತು. ಧೈರ್ಯ ಸಾಹಸ ಮೆರೆದು ಚಿರತೆಯನ್ನು ಹಿಡಿದಿದ್ದಲ್ಲದೆ, ಬೈಕ್ ಹಿಂಭಾಗಕ್ಕೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದ್ದಾನೆ. ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಚಿರತೆಗೆ ಗಂಡಸಿ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಈತ ಗಂಡಸಿಯ ಸಾಹಸಿ: ಚಿರತೆಯನ್ನು ಹಿಡಿದು ಬೈಕ್ನಲ್ಲಿ ಕಟ್ಟಿಕೊಂಡು ಹೋದ ಧೀರ!
ವಿವರಗಳಿಗೆ https://t.co/YaFZZchf1J ನೋಡಿ.. pic.twitter.com/3AQNs1ahQj— Vijayavani (@VVani4U) July 14, 2023
ಯಂಗ್ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?