ಬೆಂಗಳೂರು ಗ್ರಾಮಾಂತರ: ಬೆಸುಗೆ ಹಾಕುತ್ತಿದ್ದಾಗಲೇ ದೇಹದಿಂದ ಜೀವ ಬೇರೆಯಾದ ಹೃದಯವಿದ್ರಾವಕ ಪ್ರಕರಣವೊಂದು ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು ಇಂಥದ್ದೊಂದು ದುರಂತ ಸಂಭವಿಸಿದೆ.
ನೆಲಮಂಗಲ ತಾಲೂಕಿನ ಹೊಸನಿಜಗಲ್ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮಧುಗಿರಿ ಮೂಲದ ಫಿರೋಜ್ (40) ಸಾವಿಗೀಡಾಗಿದ್ದಾನೆ. ಈತ ಸೋಂಪುರ ಹೋಬಳಿಯ ಕೂತಘಟ್ಟ ಗ್ರಾಮದಲ್ಲಿ ವಾಸವಿದ್ದು, ವೆಲ್ಡಿಂಗ್ ವೃತ್ತಿಯಿಂದ ಜೀವನ ಸಾಗಿಸುತ್ತಿದ್ದ.
ಇಂದು ಮಧ್ಯಾಹ್ನ ಸೋಂಪುರ ಸಮೀಪದ ಹೊಸನಿಜಗಲ್ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಆಂಜನೇಯ ದೇವಾಲಯದ ವೆಲ್ಡಿಂಗ್ ಕೆಲಸದಲ್ಲಿದ್ದಾಗ ಹೈಟೆನ್ಷನ್ ವಿದ್ಯುತ್ ತಂತಿಯಿಂದ ವಿದ್ಯುತ್ ಸಂಪರ್ಕದಿಂದ ತೀವ್ರ ಆಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಮೃತದೇಹವನ್ನ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾಕ್ಡೌನ್ ಸೆಕ್ಸ್: ಆರ್ಟಿಐನಲ್ಲಿ ಬಹಿರಂಗವಾಯ್ತು ಆತಂಕಕಾರಿ ವಿಷಯ!