ಚಿಕ್ಕಬಳ್ಳಾಪುರ: ಪತ್ನಿಯ ಕಣ್ಣೆದುರೇ ಕ್ಷಣಮಾತ್ರದಲ್ಲಿ ಪತಿ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಮತ್ತೊಂದೆಡೆ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂಥದ್ದೊಂದು ದುರಂತ ಸಂಭವಿಸಿದೆ.
ಬಾಗೇಪಲ್ಲಿ ತಾಲೂಕು ಕನಂಪಲ್ಲಿ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ವೆಂಕಟೇಶಪ್ಪ ಮತ್ತಾತನ ಪತ್ನಿ ಇಬ್ಬರೂ ಜೊತೆಯಾಗಿ ಕಟಂ ಬಂಡೆಯ ಬಣವೆ ಮೇಲಿದ್ದ ಬೀನ್ಸ್ಗೆ ಹೊದಿಕೆ ಹಾಕಲು ಹೋಗಿದ್ದರು. ಇದೇ ಸಂದರ್ಭದಲ್ಲಿ ಬಂದೆರಗಿದ ಸಿಡಿಲಿಗೆ ವೆಂಕಟೇಶಪ್ಪ ಬಲಿಯಾಗಿದ್ದಾರೆ.
ಇದನ್ನೂ ಓದಿ: ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಸಿಡಿಲಿನ ಅಪ್ಪಳಿಸುವಿಕೆಗೆ ವೆಂಕಟೇಶಪ್ಪ ಸ್ಥಳದಲ್ಲೇ ಸಾವಿಗೀಡಾದರೆ, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಳೆಗೆ ಬೀನ್ಸ್ ಹಾಳಾಗಬಾರದು ಅಂತ ಟಾರ್ಪಲ್ ಹೊದಿಸಲು ಹೋದಾಗ ಈ ಅವಘಡ ಸಂಭವಿಸಿದೆ. ಸಿಡಿಲು ಬಡಿದು ಬೀನ್ಸ್ ರಾಶಿ ಸಹ ಬೆಂಕಿಗಾಹುತಿ ಆಗಿದೆ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮನ ‘ಮುಟ್ಟು’ವ ಕಾರ್ಯ: ಮನೆಯೊಡತಿಗೆ ಮುಟ್ಟಾದಾಗ ರಾಣಿಯಂತೆ ನೋಡಿಕೊಳ್ಳುತ್ತಿರುವ ಗಂಡ-ಗಂಡುಮಕ್ಕಳು!
ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ