ನವದೆಹಲಿ: ಇತ್ತೀಚಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಮೆಟ್ರೋ ಒಂದಿಲ್ಲೊಂದು ವಿಚಾರಕ್ಕೆ ಜನತೆಯ ಗಮನ ಸೆಳೆಯುತ್ತಿದ್ದು, ಇದೀಗ ಮತ್ತೊಂದು ವಿಚಾರಕ್ಕೆ ಎಲ್ಲರ ಗಮನ ಸೆಳೆದಿದೆ. ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಉದ್ಯೋಗ ಭವನ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯ ಗುರುತು ಈವರೆಗೆ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಿಂದ ಕೆಲಕಾಲ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಈ ಕುರಿತು ಪ್ರೆತಿಕ್ರಿಯಿಸಿರುವ ಡಿಎಂಆರ್ಸಿಎಲ್ನ ಹಿರಿಯ ಅಧಿಕಾರಿಯೊಬ್ಬರು, ಘಟನೆ ಬೆಳಗ್ಗೆ 11:30ರ ಸುಮಾರಿಗೆ ನಡೆದಿದ್ದು, ಮೃತ ವ್ಯಕ್ತಿಯ ಗುರುತು ಈವರೆಗೆ ಪತ್ತೆಯಾಗಿಲ್ಲ. ಆತನ ಜೇಬಿನಲ್ಲಿ ಮೊಬೈಲ್ ಸಂಖ್ಯೆ ಒಂದು ದೊರೆತ್ತಿದ್ದು, ಅದನ್ನು ಆಧರಿಸಿ ತನಿಖೆ ನಡೆಸಲಾಗುತ್ತಿದೆ. ಮೃತದೇಹವನ್ನು ಶವಾಗಾರದಲ್ಲಿ ಇರಿಸಲಾಗಿದ್ದು, ಮೃತನ ಸಂಬಂಧಿಕರು ಆಗಮಿಸಿದ ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.