More

    ಪತ್ನಿಯನ್ನು ಕಾಪಾಡಲು ಬಂದ ಪೊಲೀಸ್​ ಅಧಿಕಾರಿಯ ಮೂಗು ಮುರಿದು ಎಸ್ಕೇಪ್​ ಆದ ಗಂಡ!

    ಕೊಟ್ಟಾಯಂ: ರೂಮಿನಲ್ಲಿ ಕೂಡಿ ಹಾಕಿದ ಪತ್ನಿಯನ್ನು ಬಿಡಿಸಲು ಬಂದ ಪೊಲೀಸ್​ ಅಧಿಕಾರಿಯ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ನಡೆದಿದೆ.

    ಜಿಬಿನ್​ ಲೋಬೋ, ಹಲ್ಲೆಗೊಳಗಾದ ಪಾಂಪಡಿ ಪೊಲೀಸ್​ ಠಾಣೆಯ ಸೀನಿಯರ್​ ಸಿವಿಲ್​ ಪೊಲೀಸ್​ ಅಧಿಕಾರಿ. ಹಲ್ಲೆಯಿಂದಾಗಿ ಅಧಿಕಾರಿಯ ಮೂಗು ಮುರಿದಿದೆ ಮತ್ತು ಕಣ್ಣಿನ ರೆಪ್ಪೆಯಲ್ಲಿ ಗಾಯವಾಗಿದ್ದು, ಕೊಟ್ಟಾಯಂ ಮೆಡಿಕಲ್​​ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದ ವ್ಯಕ್ತಿಯನ್ನು ಸ್ಯಾಮ್​ ಝಕಾರಿಯಾ (42) ಎಂದು ಗುರುತಿಸಲಾಗಿದೆ. ಈತ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.

    ಇದನ್ನೂ ಓದಿ: ಆಘಾತದಿಂದ ಹೊರ ಬಾರದ ಪರಾಜಿತರು: ಹಂಗಾಮಿ ಸಿಎಂ ಬೊಮ್ಮಾಯಿ ಬಳಿ ಬೇಸರ ನಿವೇದನೆ

    ಮತ್ತಷ್ಟು ಟೀಕೆ

    ಪೊಲೀಸರು ಅನಿರೀಕ್ಷಿತ ದಾಳಿಗಳನ್ನು ತಡೆಯಲು ಶಕ್ತರಲ್ಲ ಮತ್ತು ಅದಕ್ಕೆ ತರಬೇತಿ ಪಡೆದಿಲ್ಲ ಎಂಬ ಟೀಕೆಗಳ ನಡುವೆಯೇ ಈ ಘಟನೆ ನಡೆದಿರುವುದು ಪೊಲೀಸರ ಮೇಲಿನ ಮತ್ತಷ್ಟು ಟೀಕೆಗೆ ಪ್ರಚೋದನೆ ನೀಡಿದಂತಿದೆ.

    ​ಠಾಣೆಗೆ ಕರೆ ಮಾಡಿ ದೂರು

    ಭಾನುವಾರ (ಮೇ 14) ರಾತ್ರಿ 10.15ರ ಸುಮಾರಿಗೆ ಪಂಪಾಡಿಯ ವೆಲ್ಲೂರು 8ನೇ ಮೈಲಿನಲ್ಲಿ ಈ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನನ್ನನ್ನು ರೂಮಿನಲ್ಲಿ ಕೂಡಿ ಹಾಕಿ, ಬೀಗ ಹಾಕಲಾಗಿದೆ ಎಂದು ಆರೋಪಿ ಸ್ಯಾಮ್ ಅವರ ಪತ್ನಿ, ಪಂಪಾಡಿ ಪೊಲೀಸ್​ ಠಾಣೆಗೆ ಕರೆ ಮಾಡಿ ದೂರು ನೀಡಿದ್ದರು. ಕೂಡಲೇ ಗ್ರೇಡ್ ಎಸ್‌ಐ ರಾಜೇಶ್, ಎಸ್‌ಸಿಪಿಒ ಜಿಬಿನ್ ಮತ್ತು ಹೋಂಗಾರ್ಡ್ ಜಯಕುಮಾರ್ ಮನೆಗೆ ತಲುಪಿದರು.

    ಸ್ಥಳದಿಂದ ಪರಾರಿ

    ಈ ವೇಳೆ ಪೊಲೀಸ್​ ಅಧಿಕಾರಿ ಮಹಿಳೆಯನ್ನು ಕೂಡಿ ಹಾಕಿದ್ದ ಕೊಠಡಿಯ ಬಾಗಿಲು ತೆರೆಯಲು ಯತ್ನಿಸುತ್ತಿದ್ದಾಗ ಆರೋಪಿ ಸ್ಯಾಮ್, ಜಿಬಿನ್ ಮೇಲೆ ಹಲ್ಲೆ ನಡೆಸಿದ್ದಾನೆ. ನಂತರ ಆರೋಪಿ, ರಾಜೇಶ್ ಮತ್ತು ಜಯಕುಮಾರ್ ಅವರನ್ನು ತಳ್ಳಿ ಸ್ಥಳದಿಂದ ಪರಾರಿಯಾಗಿದ್ದಾರೆ. ಮಂತುರುತಿಯ ಚಂಪಕ್ಕರ ಮೂಲದ ಪೊಲೀಸ್​ ಅಧಿಕಾರಿ ಜಿಬಿನ್ ಅವರ ಕಣ್ಣಿನ ರೆಪ್ಪೆಯ ಮೇಲೆ ಗಾಯವಾಗಿದ್ದು, ನಾಲ್ಕು ಹೊಲಿಗೆಗಳನ್ನು ಹಾಕಲಾಗಿದೆ.

    ಮೊದಲ ಪತಿಯಿಂದ ವಿಚ್ಛೇದನ

    ಆರೋಪಿಯ ಪತ್ನಿಯ ಹೆಸರು ಬಿನಿ. ಈಕೆ ತನ್ನ ಮೊದಲ ಪತಿಯಿಂದ ವಿಚ್ಛೇದನ ಪಡೆದ ನಂತರ ಎರಡು ವರ್ಷಗಳ ಹಿಂದೆ ಸ್ಯಾಮ್​ನನ್ನು ವಿವಾಹವಾದಳು. ಆಕೆಗೆ ಮೊದಲ ಪತಿಯಿಂದ ಮೂವರು ಮಕ್ಕಳಿದ್ದಾರೆ. ಯಾವುದೇ ಮಕ್ಕಳನ್ನು ಮನೆಗೆ ಕರೆತರುವುದಿಲ್ಲ ಎಂಬ ಷರತ್ತಿನ ಮೇಲೆ ಸ್ಯಾಮ್, ಬಿನಿಯನ್ನು ಮದುವೆಯಾದಳು.

    ಇದನ್ನೂ ಓದಿ: ಪಾಕ್ ಮಿಲಿಟರಿ 100 ಬಿಲಿಯನ್ ಡಾಲರ್ ಕಂಪನಿ: ಬರೀ ಸೇನೆಯಲ್ಲ, ವ್ಯಾಪಾರಿ ಸಂಸ್ಥೆಗಳ ಸಾಮ್ರಾಜ್ಯ

    ನ್ಯಾಯಾಲಯದಿಂದ ರಕ್ಷಣೆ ಆದೇಶ

    ಆದರೆ, ಇತ್ತೀಚೆಗೆ ಬಿನಿ, ತನ್ನ ಮೂರನೇ ಮಗನಿಗೆ ಅನಾರೋಗ್ಯ ಕಾರಣ ಮನೆಗೆ ಕರೆತಂದಾಗ ಗಂಡ-ಹೆಂಡತಿ ನಡುವೆ ಸಮಸ್ಯೆಗಳು ಪ್ರಾರಂಭವಾದವು. ತನ್ನನ್ನು ಮನೆಯಿಂದ ಹೊರಹಾಕದಂತೆ ನ್ಯಾಯಾಲಯದಿಂದ ರಕ್ಷಣೆ ಆದೇಶವನ್ನು ಬಿನಿ ಪಡೆದಿದ್ದರು. ಆದರೂ ಆಕೆಗೆ ಆತ ಹಿಂಸೆ ಕೊಡುತ್ತಿದ್ದ. ಆರೋಪಿ ಸ್ಯಾಮ್ ಕೊಲೆ ಪ್ರಕರಣ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. (ಏಜೆನ್ಸೀಸ್​)

    ಅಧಿಕಾರ ಹಸ್ತಾಂತರದ ಖಾತರಿ ಏನು?: ಡಿಕೆಶಿ ಬಣದ ಆತಂಕ; ಛತ್ತೀಸ್​ಗಢ, ರಾಜಸ್ಥಾನದ ನಿದರ್ಶನ

    ನ್ಯಾಯದೇವತೆ | ಕೌಟುಂಬಿಕ ನ್ಯಾಯಾಲಯದ ಪ್ರಕರಣಕ್ಕೆ ಪ್ರತಿ ಡೇಟಿಗೂ ಹಾಜರಿರಬೇಕೇ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts