More

    ಕೈಕಾಲು ಕಟ್ಟಿ, ವಿವಸ್ತ್ರಗೊಳಿಸಿ ವ್ಯಕ್ತಿಯ ಭೀಕರ ಹತ್ಯೆ

    ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೋರ್ವನನ್ನು ಕೈಕಾಲು ಕಟ್ಟಿ ವಿವಸ್ತ್ರಗೊಳಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ ತಾಲ್ಲೂಕಿನಲ್ಲಿ ನಡೆದಿದೆ.

    ಆನೇಕಲ್​ ತಾಲ್ಲೂಕಿನ ಯಾರಂಡಹಳ್ಳಿಯಲ್ಲಿ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿ ಅಂದಾಜು 40 ವರ್ಷ ವಯಸ್ಸಿನವರು ಎಂದು ಊಹಿಸಲಾಗಿದೆ.

    Anekal Murder

    ಇದನ್ನೂ ಓದಿ: VIDEO| ಮಹಿಳೆಗೆ ಕಿರುಕುಳ ನೀಡಿದ ಬಿಎಸ್​ಎಫ್​ ಯೋಧ; ಸೇವೆಯಿಂದ ಅಮಾನತು

    ಜನನಿಬಿಡ ಪ್ರದೇಶದಲ್ಲಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಕೊಲೆಯಾಗಿದ್ದು, ಪುಷ್ಟ ಎಂಬುವವರಿಗೆ ಈ ಜಾಗ ಸೇರಿತ್ತು ಎಂದು ಹೇಳಲಾಗಿದೆ. ಕಳೆದ ಐದಾರು ದಿನಗಳ ಹಿಂದೆ ಹತ್ಯೆ ನಡೆದಿಬಹುದು ಎಂದು ಶಂಕಿಸಲಾಗಿದೆ.

    ಸ್ಥಳಕ್ಕೆ ಭೇಟಿ ನೀಡಿದ ಬೆಂಗಳೂರು ಗ್ರಾಮಾಂತರ ಅಡಿಷನಲ್​ ಎಸ್ಪಿ ಪುರುಷೋತ್ತಮ್ ಪರಿಶೀಲನೆ ನಡೆಸಿ ಕೃತ್ಯ ಎಸಗಿದವರನ್ನು ಶೀಘ್ರದಲ್ಲೇ ಬಂಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೂರ್ಯನಗರ ಪೊಲೀಸ್​ ಠಾಣೆ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts