More

    ದಂಪತಿಗಳ ನಡುವೆ ಕಲಹ; ಬಿಡಿಸಲು ಹೋದವನ ಹತ್ಯೆ

    ನವದೆಹಲಿ: ದಂಪತಿಗಳ ನಡುವಿನ ಜಗಳ ಬಿಡಿಸಲು ಹೋದ ವ್ಯಕ್ತಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ರಾಷ್ಟ್ರರಾಜಧಾನಿ ನವದೆಹಲಿಯ ದಕ್ಷಿಣ ಭಾಗದಲ್ಲಿರುವ ಕಿಶನ್​ಗಢ ಎಂಬ ಪ್ರದೇಶದಲ್ಲಿ ನಡೆದಿದೆ.

    ಘಟನೆ ಶನಿವಾರ ಸಂಜೆ ನಡೆದಿದ್ದು, ಮೃತ ದುರ್ದೈವಿಯನ್ನು ರಾಬಿನ್​ ಶ್ರೇಷ್ಟಾ(25) ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಮಣಿಪುರ ಮೂಲದ ಮಿಂಗ್​ಚಾಂಗ್​ ಅಲಿಯಾಸ್​ ಜಿಮ್ಮಿ(26) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

    ಪ್ರಕರಣದ ಹಿನ್ನಲೆ

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ತನ್ನ ಮನೆಯಲ್ಲಿ ಎಸಿ ಇಲ್ಲದ ಕಾರಣ ಆರೋಪಿ ಜಿಮ್ಮಿ ಹೆಂಡತಿ ಹಾಗೂ ಮಗನ ಜೊತೆಗೆ ರಾಬಿನ್​ ಮನೆಯಲ್ಲಿ ವಾಸವಿದ್ದ. ಶನಿವಾರ ರಾಬಿನ್​ನ ಮನೆಯಲ್ಲಿ ಆರೋಪಿ ಮಧ್ಯ ಸೇವಿಸಿದ್ದು, ತನ್ನ ಹೆಂಡತಿ ಜೊತೆ ಜಗಳವಾಡಲು ಶುರು ಮಾಡಿದ್ದಾನೆ.

    ಇದನ್ನೂ ಓದಿ: ಸನಾತನ ಹೇಳಿಕೆ ವಿವಾದ; ಸಚಿವ ಉದಯನಿಧಿ ಸ್ಟಾಲಿನ್​ ಮಾತನಾಡಿರುವುದರಲ್ಲಿ ತಪ್ಪೇನಿದೆ: ನಟ ಪ್ರಕಾಶ್​ ರಾಜ್​

    ಇದನ್ನು ಗಮನಿಸಿದ ರಾಬಿನ್​ ಹಾಗೂ ಆತನ ಗೆಳತಿ ದಂಪತಿಗಳ ನಡುವಿನ ಜಗಳವನ್ನು ಬಿಡಿಸಲು ಮುಂದಾಗಿದ್ದಾರೆ. ಪಾನಮತ್ತನಾಗಿದ್ದ ಆರೋಪಿ ಜಿಮ್ಮಿ ಇದು ತನ್ನ ದಾಂಪತ್ಯದ ವಿಚಾರವಾಗಿದ್ದು, ಇದರಲ್ಲಿ ತಲೆ ಹಾಕದಂತೆ ಎಚ್ಚರಿಸಿದ್ದಾನೆ. ಈ ವೇಳೆ ರಾಬಿನ್​ ಹಾಗೂ ಜಿಮ್ಮಿ ನಡುವಿನ ಜಗಳ ತಾರಕಕ್ಕೇರಿದ್ದು, ಆರೋಪಿ ಜಿಮ್ಮಿ ರಾಬಿನ್​ ಎದೆಗೆ ಚಾಕುವಿನಿಂದ ಇರಿದಿದ್ದಾನೆ.

    ಗಂಭೀರವಾಗಿ ಗಾಯಗೊಂಡಿದ್ದ ರಾಬಿನ್​ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆರೋಪಿ ಜಿಮ್ಮಿ ವಿರುದ್ಧ ಭಾರತ ದಂಡ ಸಂಹಿತೆ (IPC Section) 302ರ ಅಡಿಯಲ್ಲಿ ಪ್ರಕರಣ ದಾಖಲಿಸಕೊಳ್ಳಲಾಗಿದ್ದು, ಶೀಘ್ರದಲ್ಲೇ ಚಾರ್ಜ್​ಶೀಟ್​ ಸಿದ್ದಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts