ಉತ್ತರಕನ್ನಡ: ಕೌಟುಂಬಿಕ ಕಲಹ ಯಾವ್ಯಾವ ಹಂತಕ್ಕೆ ತಲುಪುತ್ತದೆ ಎಂಬುದಕ್ಕೆ ಇದೂ ಒಂದು ನಿದರ್ಶನ. ಮೊಮ್ಮಗುವನ್ನು ನೋಡಲೆಂದು ಬಂದ ಅತ್ತೆಗೆ ಅಳಿಯ ಚಾಕು ಚುಚ್ಚಿದ ಪ್ರಕರಣವೊಂದು ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಉತ್ತರಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ದಾಂಡೇಲಿ ಮೂಲದ ರಮಜಾನ್ (25) ಎಂಬಾತ ತನ್ನ ಅತ್ತೆ ಕದ್ರಾ ಎಂಬಲ್ಲಿನ ಮಹಮ್ಮದಬೀ ಎಂಬಾಕೆಯ ಹೊಟ್ಟೆಗೆ ಚಾಕು ಚುಚ್ಚಿದ್ದಾನೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಪ್ರಕರಣ ನಡೆದಿದೆ ಎನ್ನಲಾಗಿದೆ.
ಮಹಮ್ಮದಬೀ ತನ್ನ ಮಗಳ ಮಗುವನ್ನು ನೋಡಲು ಆಸ್ಪತ್ರೆಗೆ ಬಂದಿದ್ದಾಗ, ನನ್ನ ಮಗುವನ್ನ ನೋಡು ನೀವು ಯಾಕೆ ಬಂದಿದ್ದೀರಿ? ಎಂದು ತಕರಾರು ತೆಗೆದ ರಮಜಾನ್ ಅತ್ತೆಯ ಮೇಲೆ ಹಲ್ಲೆ ಮಾಡಿದ್ದ. ಅಲ್ಲದೆ ಮದ್ಯದ ಅಮಲಿನಲ್ಲಿ ಆಕೆಯ ಹೊಟ್ಟೆಗೆ ಚಾಕುವನ್ನು ಚುಚ್ಚಿದ್ದ. ಗಂಭೀರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಡ್ಡ-ಮೀಸೆ ಬಗ್ಗೆ ತಮಾಷೆ ಮಾಡಿ ಇಕ್ಕಟ್ಟಿಗೆ ಸಿಲುಕಿದ ಮಹಿಳೆ; ಕೇಸ್ ಬಿತ್ತು, ಕ್ಷಮೆ ಕೂಡ ಕೇಳಿದ್ಲು..