More

    ಜಗಳ ಮಾಡಿದ ಎಂದು ತನ್ನ ಸ್ನೇಹಿತನ ಕಿವಿಗೆ ಮೂತ್ರ ವಿಸರ್ಜಿಸಿದ ವ್ಯಕ್ತಿ; ಇಬ್ಬರ ಬಂಧನ

    ಉತ್ತರಪ್ರದೇಶ: ಸೋನಭದ್ರಾದಲ್ಲಿ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ಕಿವಿಗೆ ಮೂತ್ರ ವಿಸರ್ಜಿಸಿದ ಘಟನೆ ಇದೀಗ ಬೆಳಕಿಗೆ ಬಂದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಇಬ್ಬರನ್ನು ಬಂಧಿಸಿದ್ದಾರೆ.

    ಇದನ್ನೂ ಓದಿ: ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನಗಳ ಆಸ್ತಿ ಸರ್ವೇ ಪ್ರಭಾವಿಗಳ ಒತ್ತಡಕ್ಕೆ ಸಿಲುಕಿದ್ದಾರಾ ಅಧಿಕಾರಿಗಳು?

    ಘಟನೆಯ ವಿವರ: ಜುಲೈ 11 ರಂದು ಜಿಲ್ಲೆಯ ಜುಗೈಲ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಉತ್ತಮ ಸಂಬಂಧ ಹೊಂದಿದ್ದ ಇಬ್ಬರು ಸ್ನೇಹಿತರ ನಡುವೆ ಜಗಳ ಪ್ರಾರಂಭವಾಗಿದೆ. ಮದ್ಯ ಸೇವಿಸಿದ ಕಾರಣ ಮಾತಿನ ಜಟಾಪಟಿ ಹೊಡೆದಾಟ ಹಂತಕ್ಕೆ ತಲುಪಿದೆ. ಈ ವೇಳೆ ಜವಾಹರ್ ಪಟೇಲ್ ಎಂಬ ವ್ಯಕ್ತಿ ತನ್ನ ಸ್ನೇಹಿತ ಗುಲಾಬ್ ಕೋಲ್ ಎಂಬುವವನ ಮೇಲೆ ಮೊದಲು ಹಲ್ಲೆ ನಡೆಸಿ, ತದನಂತರ ಆತನ ಕಿವಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ.

    ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ ಬೆನ್ನಲ್ಲೇ ಪೊಲೀಸರು ಸೂಕ್ತ ವಿಚಾರಣೆ ನಡೆಸಿದ್ದಾರೆ. ಹಲ್ಲೆಗೊಳಗಾದ ಗುಲಾಬ್ ಕೋಲ್ ತನ್ನ ಸ್ನೇಹಿತನ ವಿರುದ್ಧ ದೂರು ದಾಖಲಿಸಿದ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ಪಟೇಲ್ ಮತ್ತು ಆತನ ಸಹಚರನನ್ನು ಬಂಧಿಸಿದ್ದಾರೆ,(ಏಜೆನ್ಸೀಸ್).

    ಹೊಸ ನಾಯಕಿಯನ್ನು ಪರಿಚಯಿಸಲು ಸಜ್ಜಾದ ನಿರ್ದೇಶಕ ಪುರಿ ಜಗನ್ನಾಥ್; ಯಾರು ಆ ನಾಯಕಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts