ಡಿ.ಕೆ.ಶಿವಕುಮಾರ್​​ರನ್ನು ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲುಶಿಕ್ಷೆ!

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ನಿಂದಿಸಿದ್ದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಎರಡು ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ನ್ಯಾಯಾಲಯದಿಂದ ಈ ತೀರ್ಪು ನೀಡಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ. ಸುಳ್ಯ ನ್ಯಾಯಾಲಯದ ನ್ಯಾಯಾಧೀಶರಾದ ಸೋಮೇಶೇಖರ್ ಅವರು ಗಿರಿಧರ್ ರೈಗೆ 2 ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್​ 2016ರಲ್ಲಿ ಇಂಧನ ಸಚಿವರಾಗಿದ್ದ ವೇಳೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತೀರ್ಪು ನೀಡಲಾಗಿದೆ. ಗಿರಿಧರ್ ರೈ 2016ರ ಫೆ.28ರಂದು … Continue reading ಡಿ.ಕೆ.ಶಿವಕುಮಾರ್​​ರನ್ನು ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲುಶಿಕ್ಷೆ!