ರೋಚಕ ರಕ್ಷಣಾ ಕಾರ್ಯಾಚರಣೆ; ಟ್ರೆಕ್ಕಿಂಗ್ ವೇಳೆ ಕಂದಕಕ್ಕೆ ಬಿದ್ದವನ ರಕ್ಷಣೆ

ಚಿಕ್ಕಬಳ್ಳಾಪುರ: ನಂದಿಬೆಟ್ಟದ ಬಳಿ ಟ್ರೆಕ್ಕಿಂಗ್​ಗೆ ತೆರಳಿ ದುರ್ಗಮ ಪ್ರದೇಶಕ್ಕೆ ಜಾರಿ ಬಿದ್ದಿದ್ದ ಯುವಕನನ್ನು ಕೊನೆಗೂ ರಕ್ಷಿಸುವಲ್ಲಿ ವಾಯುಸೇನೆಯ ರಕ್ಷಣಾ ಪಡೆ ಯಶಸ್ವಿಯಾಗಿದೆ. ದೆಹಲಿ ಮೂಲದ ನಿಶಾಂತ್ ಗುಲ್ ನಂದಿಬೆಟ್ಟಕ್ಕೆ ಟ್ರೆಕ್ಕಿಂಗ್​​ಗೆ ಬಂದಿದ್ದು, ಅಲ್ಲಿ ಪ್ರವೇಶ ನಿಷೇಧವಿದ್ದಿದ್ದರಿಂದ ಪಕ್ಕದ ಬ್ರಹ್ಮಗಿರಿ ಬೆಟ್ಟಕ್ಕೆ ತೆರಳಿದ್ದ. ಆದರೆ ಅಲ್ಲಿ ಕಾಲು ಜಾರಿ ಕಂದಕಕ್ಕೆ ಬಿದ್ದಿದ್ದು, ಅಪಾಯಕ್ಕೆ ಸಿಲುಕಿದ್ದ. ಅದಾಗ್ಯೂ ಮೊಬೈಲ್​ಫೋನ್ ಮೂಲಕ ತುರ್ತು ಸಂದೇಶ ಕಳಿಸಿ ಅಪಾಯಕ್ಕೆ ಸಿಲುಕಿದ್ದ ಮಾಹಿತಿ ರವಾನಿಸಿದ್ದ. ವಿಷಯ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ … Continue reading ರೋಚಕ ರಕ್ಷಣಾ ಕಾರ್ಯಾಚರಣೆ; ಟ್ರೆಕ್ಕಿಂಗ್ ವೇಳೆ ಕಂದಕಕ್ಕೆ ಬಿದ್ದವನ ರಕ್ಷಣೆ