ನವದೆಹಲಿ: ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿ ರೈತರಿಗೆ ಸಹಾಯ ಮಾಡಲೆಂದು ತೆರಳಿದ್ದ ಓರ್ವ ವ್ಯಕ್ತಿ ದಾರುಣ ಮರಣಕ್ಕೀಡಾಗಿದ್ದಾನೆ. ಕಾರಿನಲ್ಲಿ ಮಲಗಿದ್ದ ಸಮಯದಲ್ಲಿ ಕಾರಿಗೆ ಬೆಂಕಿ ತಗುಲಿದ್ದು, ಆತನ ಸಜೀವ ದಹನವಾಗಿದೆ.
ಇದನ್ನೂ ಓದಿ: ಜೈಲಿನಲ್ಲಿ ರಾಗಿಣಿ, ಸಂಜನಾ ಏನು ಮಾಡುತ್ತಿದ್ದಾರೆ ಗೊತ್ತಾ? ಮಾದಕ ನಟಿಯರು ಜೈಲಿನಲ್ಲಿ ಇಷ್ಟೊಂದು ಬದಲಾಗಿದ್ದೇಗೆ?
ಜನಕ ರಾಜ್ (55) ಹೆಸರಿನ ವ್ಯಕ್ತಿ ಪಂಜಾಬ್ನ ಬರ್ನಾಲಾ ಜಿಲ್ಲೆಯ ಧನೋಲುವಾ ಗ್ರಾಮದ ಮೂಲದವನಾಗಿದ್ದು, ರೈತ ಹೋರಾಟಕ್ಕೆಂದು ಅಲ್ಲಿಂದ ದೆಹಲಿಗೆ ಬಂದಿದ್ದ. ಟ್ರ್ಯಾಕ್ಟರ್ ಮೆಕಾನಿಕ್ ಆಗಿದ್ದ ಆತನನ್ನು ಹೋರಾಟ ನಿರತ ರೈತರ ಟ್ರ್ಯಾಕ್ಟರ್ಗಳನ್ನು ಸರಿ ಮಾಡಲೆಂದೇ ಕರೆಸಿಕೊಳ್ಳಲಾಗಿತ್ತು. ಶನಿವಾರ ರಾತ್ರಿ ತನ್ನ ಕೆಲಸ ಮುಗಿಸಿದ ಆತ ಕಾರಿನಲ್ಲಿ ನಿದ್ರೆಗೆ ಜಾರಿದ್ದಾನೆ. ಈ ಸಮಯದಲ್ಲಿ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕಾರಿನಲ್ಲಿದ್ದ ಜನಕ ರಾಜ್ ಅಲ್ಲಿಯೇ ಸಜೀವ ದಹನವಾಗಿದ್ದಾನೆ.
ಜನಕ ರಾಜ್ನ ದುರ್ಮರಣಕ್ಕೆ ರೈತ ಮುಖಂಡರು ಸೇರಿ ಅನೇಕ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. (ಏಜನ್ಸೀಸ್)
ಲಾಡ್ಜ್ಗೆ ಬರುವಾಗ ಇಬ್ಬರು, ಹೋಗುವಾಗ ಒಬ್ಬನೇ: ಮುಚ್ಚಿದ್ದ ಕೊಠಡಿ ತೆರೆದವರಿಗೆ ಕಾದಿತ್ತು ಶಾಕ್!