ಉಡುಪಿ: ಚಿನ್ನದಂಗಡಿಯ ಹುಡುಗಿಯ ಹೃದಯಕ್ಕೆ ಕನ್ನ ಹಾಕಲು ಯತ್ನಿಸಿದ ಯುವಕನೊಬ್ಬ ಕೊನೆಗೆ ಅದರಲ್ಲಿ ವಿಫಲನಾಗಿದ್ದಲ್ಲದೆ, ಆಕೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ. ಬಳಿಕ ಆತ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಶಿರಿಯಾರದಲ್ಲಿ ಈ ಘಟನೆ ನಡೆದಿದೆ. ರಿಕ್ಷಾ ಚಾಲಕ ರಾಘವೇಂದ್ರ ಕುಲಾಲ್ ಶವವಾಗಿ ಪತ್ತೆಯಾದ ಯುವಕ. ಈತ ಶಿರಿಯಾರದ ಆಭರಣ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ.
ಇದನ್ನೂ ಓದಿ: ನೀನೇ ಸಾಕಿದ ಗಿಣಿ ನಿನ್ನ ಹದ್ದಾಗಿ ಕುಕ್ಕಿತಲ್ಲೋ..; ಆರ್ಟಿಐ ಕಾರ್ಯಕರ್ತನನ್ನೇ ಇಕ್ಕಟ್ಟಿಗೆ ಸಿಲುಕಿಸಿದ ಮಹಿಳಾ ಅಧಿಕಾರಿ!?
ಇಂದು ಆಕೆ ಊಟಕ್ಕೆಂದು ಮಳಿಗೆಯಿಂದ ಹೊರಬಂದಿದ್ದಾಗ ಹಿಂಬಾಲಿಸಿದ ಈತ ಶಿರಿಯಾರದ ರಾಮಮಂದಿರ ಬಳಿ ಯುವತಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ. ಅದೃಷ್ಟವಶಾತ್ ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ನಂತರ ರಾಘವೇಂದ್ರನ ಶವ ಸಮೀಪದ ಹಾಡಿಯಲ್ಲಿ ಕಂಡುಬಂದಿದೆ. ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
25 ಸಾವಿರಕ್ಕೂ ಅಧಿಕ ಮಾತ್ರೆ ತಿಂದಿದ್ದರೂ ಪ್ರಯೋಜನವಾಗಿಲ್ಲ ಎಂದು ಗುಂಡು ಹೊಡೆದುಕೊಂಡು ಬಿಇಒ ಆತ್ಮಹತ್ಯೆ!