ಶಹಜಹಾನ್ಪುರ್: ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿ ಒಬ್ಬನನ್ನು ಅಮಾನುಷವಾಗಿ ಹೊಡೆದು ಕೊಲೆ ಮಾಡಿ ಆತನ ಶವವನ್ನು ಸರ್ಕಾರಿ ಆಸ್ಪತ್ರೆ ಮುಂದೆ ಎಸೆದಿರುವ ಘಟನೆ ಉತ್ತರಪ್ರದೇಶದ ಶಹಜಹಾನ್ಪುರದಲ್ಲಿ ನಡೆದಿದೆ.
ಶಿವಂ ಜೊಹ್ರಿ(32) ಮೃತ ದುರ್ದೈವಿ ಎಂದು ತಿಳಿದು ಬಂದಿದ್ದು. ಇವರನ್ನು ಕಂಬಕ್ಕೆ ಕಟ್ಟಿ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಳ್ಳತನ ಶಂಕೆ
ಟ್ರಾನ್ಸ್ಪೋರ್ಟ್ ಕಂಪನಿ ಒಂದರಲ್ಲಿ ಮ್ಯಾನೇಜರ್ ಆಗಿ ಏಳು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಶಿವಂ ಮೇಲೆ ಕಳ್ಳತನ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಸಂಸ್ಥೆಯ ಮಾಲೀಕ ಬಂಕಿಮ್ ಸೂರಿ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದವರನ್ನು ಹಿಡಿದು ಥಳಿಸಿ ಬಾಯಿ ಬಿಡಿಸಲು ಯತ್ನಿಸಿದ್ದಾರೆ.
ಇದನ್ನೂ ಓದಿ: VIDEO| ಅರಣ್ಯ ಇಲಾಖೆ ಕರೆದೊಯ್ದಿದ್ದ ಕೊಕ್ಕರೆ-ಆರಿಫ್ ಒಂದಾಗಬೇಕು: ಬಿಜೆಪಿ ಸಂಸದ
ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಶಿವಂ ಮೃತಪಟ್ಟಿದ್ದು ಅವರ ದೇಹವನ್ನು ಸರ್ಕಾರಿ ಆಸ್ಪತ್ರೆ ಮುಂಭಾಗ ಎಸೆದು ಆರೋಪಿಗಳು ಪರಾರಿಯಾಗಿದ್ದರು.
ಕರೆಂಟ್ ಹೊಡೆದು ಸಾವು
ಸರ್ಕಾರಿ ಆಸ್ಪತ್ರೆಯಲ್ಲಿ ಬಳಿ ಶಿವಂ ಶವ ದೊರೆತ ಬಗ್ಗೆ ಪೊಲೀಸರಿಗೆ ತಿಳಿಸಿದ್ದರು. ಈ ವೇಳೆ ಕುಟುಂಬಸ್ಥರು ಕರೆಂಟ್ ಹೊಡೆದು ಮೃತಪಟ್ಟಿರುವುದಾಗಿ ತಿಳಿಸಿದ್ದರು.
ಶಿವಂ ದೇಹದ ಮೇಲೆ ಗಾಯದ ಗುರುತುಗಳನ್ನು ಗಮನಿಸಿದ ಪೊಲೀಸ್ ಸಿಬ್ಬಂದಿ ತನಿಖೆ ಪ್ರಾರಂಭಿಸಿದ್ದಾರೆ.
ಪ್ರಕರಣ ದಾಖಲು
ಇತ್ತೀಚಿಗೆ ಕನ್ಹಿಯಾ ಹೊಸೈರಿ ಸಂಸ್ಥಗೆ ಸೇರಿದ್ದ ಪ್ಯಾಕೇಜ್ ಒಂದು ಕಾಣೆಯಾಗಿತ್ತು. ಇದರ ಬಗ್ಗೆ ವಿಚಾರಿಸಲು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ಥಳಿಸಲಾಗಿದೆ.
ಘಟನೆ ಸಂಬಂಧ ಏಳು ಮಂದಿ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದ್ದು ಇದು ಟ್ರಾನ್ಸ್ಪೋರ್ಟ್ ಸಂಸ್ಥೆ ಮಾಲೀಕ ಬಂಕಿಮ್ ಸೂರಿ ಹಾಗೂ ಕನ್ಹಿಯಾ ಹೊಸೈರಿ ಮಾಲೀಕ ನೀರಜ್ ಗುಪ್ತಾ ಅವರನ್ನು ಹೆಸರಿಸಲಾಗಿದ್ದು ಆರೋಪಿಗಳು ತಲೆ ಮಾರಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.