More

    ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಮಂಡಲ ಪೂಜೋತ್ಸವ ಸಂಪನ್ನ

    ಸುಂಟಿಕೊಪ್ಪ: ವಿವಿಧ ಪೂಜಾ ಕೈಂಕರ್ಯ ಹಾಗೂ ಅನ್ನಸಂತರ್ಪಣೆಯೊಂದಿಗೆ ಇಲ್ಲಿನ ಶ್ರೀಪುರಂ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಮಂಡಲ ಪೂಜೋತ್ಸವ ಸಂಪನ್ನಗೊಂಡಿತು.

    ಪೂಜೋತ್ಸವ ಅಂಗವಾಗಿ ದೇವಾಲಯವನ್ನು ತಳಿರು ತೋರಣ, ವಿವಿಧ ಬಗೆಯ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬುಧವಾರ ಗಣಪತಿ ಹೋಮ, ಕನ್ನಿಮೂಲ ಗಣಪತಿಗೆ ಎಳನೀರು ಅಭಿಷೇಕ, ಚಂಡೆಮೇಳ, ಶ್ರೀ ಸ್ವಾಮಿಗೆ ಪಂಚಾಮೃತ ಅಭಿಷೇಕ, ಲಕ್ಷಾರ್ಚನೆ, ಪಲ್ಲಪೂಜೆ ಬಿಲ್ವಪತ್ರೆ ಅರ್ಚನೆ, ತುಳಸಿ ಅರ್ಚನೆ, ಪಂಚಾಮೃತ ಅಭಿಷೇಕ, ದೂರ್ವಾರ್ಚನೆ ನಂತರ ಪಟಾಕಿ ಸಿಡಿಸಲಾಯಿತು.

    ದೇವಸ್ಥಾನದ ಅರ್ಚಕ ಗಣೇಶ ಉಪಾಧ್ಯಾಯ ಅವರ ನೇತೃತ್ವದಲ್ಲಿ ಮಂಜುನಾಥ ಭಟ್, ರಾಘವೇಂದ್ರ ಭಟ್, ಮಹಾಭಲೇಶ್ವರ ಭಟ್, ಮನೋಜ್ ಭಟ್ ಪೂಜಾ ಕೈಂಕರ್ಯ ನೇರವೇರಿಸಿದರು.

    ಕ್ಷೇತ್ರದ ಅಧ್ಯಕ್ಷ ಬಿ.ಎಂ.ಸುರೇಶ್ (ಪುಟ್ಟ) ಉಪಾಧ್ಯಕ್ಷರಾದ ಬಿ.ಎ.ಪುನೀತ್, ಪ್ರಶಾಂತ್ ಕುಮಾರ್,(ಕೋಕ) ಎಂ.ಮಂಜುನಾಥ್, ಕೆ.ರವಿ, ಪ್ರಧಾನ ಕಾರ್ಯದರ್ಶಿ ಎಂ.ಚಂದ್ರ, ಖಜಾಂಜಿ ಎಂ.ಆರ್.ಶಶಿಕುಮಾರ್, ಗೌರವಾಧ್ಯಕ್ಷರಾದ ಕೆ.ಎ.ಬಾಲಕೃಷ್ಣ, ಮುತ್ತಯ್ಯ, ಸುರೇಶ್ ಗೋಪಿ, ಕಾರ್ಯದರ್ಶಿಗಳಾದ ವಿ.ಕೆ.ರಾಜು, ಕೆ.ಕನೀಸ್, ಮಣಿಕಂಠ, ಸಂಘಟನಾ ಕಾರ್ಯದರ್ಶಿಗಳಾದ ಪೃಥ್ವಿರಾಜ್, ಡಿ.ಕೆ.ರಾಖೇಶ್, ಶೇಖರ (ಅಣ್ಣು), ಎಂ.ಉದಯ, ಕೆ.ಕೆ.ವಾಸು, ಸಿ.ಸಿ.ಸುನೀಲ್, ಧನುಕಾವೇರಪ್ಪ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts