More

    ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಲಿ

    ತರೀಕೆರೆ: ಮಂಡ್ಯ ಜಿಲ್ಲೆಯ ಹುರುಗಲುವಾಡಿಯಲ್ಲಿ ಬಂಜಾರ ಸಮಾಜದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ತಾಂಡಾ ರಕ್ಷಣಾ ವೇದಿಕೆ, ತಾಲೂಕು ಬಂಜಾರ ಸಂಘ, ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಚಿತ್ರದುರ್ಗ ಬಂಜಾರ ಗುರುಪೀಠದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ ನೇತೃತ್ವದಲ್ಲಿ ಪಟ್ಟಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

    ಸರ್ದಾರ್ ಸೇವಾಲಾಲ್ ಶ್ರೀ ಮಾತನಾಡಿ, ಸಮಾಜದ ಹೆಣ್ಣು ಮಕ್ಕಳ ಮೇಲೆ ಆತ್ಯಾಚಾರ, ದೌರ್ಜನ್ಯಗಳಂಥ ಪ್ರಕರಣಗಳು ಹೆಚ್ಚಾಗಿವೆ. ಮಹಿಳೆಯರು ಒಂಟಿಯಾಗಿ ಓಡಾಡದ ಪರಿಸ್ಥಿತಿ ನಿರ್ವಣವಾಗಿದೆ. ಮಂಡ್ಯ ಜಿಲ್ಲೆಯಲ್ಲಿ ನಡೆದಿರುವ ಪ್ರಕರಣ ಇಡೀ ಸಮುದಾಯವನ್ನು ಬೆಚ್ಚಿಬೀಳಿಸಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ಬಡತನದಲ್ಲಿ ದಿನದೂಡುತ್ತಿರುವ ಸಮಾಜದ ಕೆಲವರು ಜೀವನ ನಿರ್ವಹಣೆಗೆ ರಾಜ್ಯದ ವಿವಿಧೆಡೆಗೆ ವಲಸೆ ಹೋಗಬೇಕಾದ ಅನಿವಾರ್ಯತೆ ಇದೆ. ಕುಟುಂಬ ಸಮೇತರಾಗಿ ಹೋಗುವವರಿಗೆ ಅಲ್ಲಿ ಸೂಕ್ತ ರಕ್ಷಣೆ ಸಿಗುತ್ತಿಲ್ಲ. ಮಂಡ್ಯದಲ್ಲಿ ನಡೆದಿರುವ ದುಷ್ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts